Two children drowned in the lake; Minister Santhosh Lad visited Yarinarayanpur village

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು.

ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ‌. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ಸಹ ಕೊಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲ ಪಂಚಾಯತ, ಜಿಲ್ಲಾಡಳಿತದಿಂದ ಕೆರೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ ರೂ. 50 ಲಕ್ಷ ಅನುದಾನವನ್ನು ನೀಡಲಾಗಿತ್ತು. ಕೆರೆ ಕೂಡ ಬಹಳಷ್ಟು ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.

ಜಿಲ್ಲಾಡಳಿತದಿಂದ ಕೆರೆಗೆ ತಡೆಗೋಡೆ ನಿರ್ಮಾಣ

ಯರಿನಾರಾಯಣಪುರ ಗ್ರಾಮದ ಕೆರೆಗೆ ಜಿಲ್ಲಾಡಳಿತದಿಂದ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಇಂತಹ ಅವಘಡಗಳನ್ನು ತಡೆಯಲಾಗುವುದಿಲ್ಲ. ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಶಾಸಕರ ಅನುದಾನದಿಂದ ತಡೆಗೋಡೆ ನಿರ್ಮಾಣ ಮಾಡಬಹುದಾಗಿತ್ತು. ತಡೆಗೋಡೆ ನಿರ್ಮಾಣದಿಂದ ಸಮಸ್ಯೆಗಳು ಪರಿಹರಿಯುವುದಿಲ್ಲ. ಗ್ರಾಮಸ್ಥರು ಸಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಅಂಗನವಾಡಿ ಕೇಂದ್ರ ಸ್ಥಳಾಂತರ

ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ‌ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ‌‌. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ ಎಂದರು.

ಕುಟುಂಬಸ್ಥರಿಗೆ ಪರಿಹಾರ ಕೊಡಿಸಲು ಮುಖ್ಯಮಂತ್ರಿಗಳಲ್ಲಿ ಮನವಿ

ಮೃತ ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳನ್ನು ಸ್ವತಃ ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂತೋಷ್‌ ಲಾಡ್ ಫೌಂಡೇಶನ್ ನಿಂದ ಧನ ಸಹಾಯ

ಸಂತೋಷ ಲಾಡ್ ಫೌಂಡೇಶನ್ ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನವನ್ನು ವಿತರಣೆ ಮಾಡಿದರು. ಕುಟುಂಬಸ್ಥರು ಹೆಚ್ಚಿನ ಧೈರ್ಯ ತಂದುಕೊಳ್ಳಬೇಕು ಎಂದು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಶೀಲ್ದಾರರಾದ ರಾಜು ಮಾವರಕರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸಿಪಿ ವಿನೋದ ಮುಕ್ತೇದಾರ, ಡಿಡಿಪಿಐ ಎಸ್.ಎಸ್.ಕೆಳದಿಮಠ ಮತ್ತಿತರರು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ