Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು