Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ