Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ