Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.