ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಎಸ್.ಡಿ.ಎಗಳನ್ನು ನಿಯೋಜಿಸಿರುವುದನ್ನು ಕೈ ಬಿಡಬೇಕು ಎಂದು ತಹಸೀಲ್ದಾರ್‌ರಗೆ ಗ್ರಾಪಂ ನೌಕರರು ಗುರುವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಪಂ ನೌಕರರು, ತಹಸೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಗ್ರಾಮ ಪಂಚಾಯಿತಿಗೆ ಸಂಬAಧಿಸಿದAತೆ ಸಾಮಾನ್ಯ ಸಭೆ ನಿರ್ವಹಣೆ, ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿ,ಕರ ವಸೂಲಾತಿ ಆಂದೋಲನ, ಇಸ್ವತ್ತು ಉತಾರೆ ಜನನ-ಮರಣ ಉತಾರೆ ವಿತರಿಸುವುದು ಅವಶ್ಯವಿರುತ್ತದೆ.ಒಂದುವೇಳೆ ನಾವು ಪಂಚಾಯಿತಿಯಲ್ಲಿ ಇಲ್ಲದಿದ್ದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.ರೈತರಿಗೆ ಸಂಬAಧಿಸಿದAತೆ ಬೆಳೆ ಕಟಾವು ಮಾಡುವುದು, ಇಲಾಖೆಯ ಆನಲೈನ್ ಸೇವೆಗಳು ನಿರ್ವಹಿಸುವುದು,ಸೆ.17 ರಿಂದ ಅ.2ರವರೆಗೆ ಗಾಂಧೀಜಿ ಜಯಂತಿ ನಿಮಿತ್ಯ ವಿಶೇಷ ಅಭಿಯಾನ ಸ್ವಚ್ಛತಾ ಅಭಿಯಾನ,ವಾರ್ಡಸಭೆ, ಗ್ರಾಮಸಭೆ ನಡೆಸಿ ತಾಪಂ ಕಚೇರಿಗೆ ಸಲ್ಲಿಸುವ ಜವಾಬ್ದಾರಿ ಕಾರ್ಯದರ್ಶಿಗಳು,ಎಸ್‌ಡಿಎಗಳಿಗೆ ಇರುತ್ತದೆ.ಆದ್ದರಿಂದ ಈ ಎಲ್ಲ ಕೆಲಸಗಳ ಒತ್ತಡದ ಮಧ್ಯೆ ನಮಗೆ ತರಬೇತಿಯನ್ನೂ ನೀಡದೇ ಕೇಂದ್ರಸ್ಥಾನದಲ್ಲಿಯೇ ಸಮೀಕ್ಷೆಗೆ ನಿಯೋಜಿಸದೇ ಬೇರೊಂದು ಸ್ಥಳಕ್ಕೆ ನೇಮಿಸಿರುವುದು ಹತ್ತಾರು ತೊಂದರೆಗೆ ಕಾರಣವಾಗುತ್ತದೆ.ಕೂಡಲೇ ಸಮೀಕ್ಷೆ ಕಾರ್ಯದಿಂದ ಗ್ರಾಪಂ ಕಾರ್ಯದರ್ಶಿ,ಎಸ್.ಡಿ.ಎ ಅವರನ್ನು ಕೈ ಬಿಡಬೇಕು ಎಂದು ವಿನಂತಿಸಿದರು.

ಮನವಿ ಸಲ್ಲಿಕೆ ಸಮಯದಲ್ಲಿ ಎಸ್.ವಾಯ್.ದ್ಯಾಮಗೊಂಡ, ಅಶೋಕ ಕೊರವೇರ, ಎ.ಎಸ್.ಬಿರಾದಾರ, ರಂಗರಾಜು, ಪಿ.ವಾಯ್.ಚಲವಾದಿ, ಜಿ.ಎಲ್.ಬಿರಾದಾರ, ಸಿ.ಬಿ.ಹೊಳಿ, ಟಿ.ಎಂ.ಕೋಲಕಾರ, ಎಸ್.ಎಸ್.ಬಂಗಾರಗುAಡ ,ಯಮನೂರಿ ಲಮಾಣಿ, ಸಿ.ಎನ್.ಊರನ್ನವರ,ಜಿ.ಎಸ್.ಬಿರಾದಾರ,ಬಿ.ಬಿ.ಬಿರಾದಾರ, ರವಿಕಾಂತ ಮೇಟಿ, ಬಾಬು ಪೋತೆಗೋಳ ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,