ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ ದಿ.ಚೆನ್ನಣ್ಣ ದೇಸಾಯಿ ಅವರ ಐದನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಜ.19 ರಿಂದ 21ರವರೆಗೆ ವಿವಿಧ ಧಾರ್ಮಿಕ,ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರ ನಿವಾಸದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದಾಸೋಹ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ,ಭಕ್ತ ಹಿತಚಿಂತನಾ ಸಭೆ,ರಾಷ್ಟಿçÃಯ ನಾಟಕೋತ್ಸವ,ಎಸ್.ಎಸ್.ಎಲ್.ಸಿ,ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ,ಪೌರಕಾರ್ಮಿಕರಿಗೆ ಸನ್ಮಾನ ನಡೆಯಲಿದ್ದು ಹುಡ್ಕೋದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಈ ಎಲ್ಲ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಮುದ್ದೇಬಿಹಾಳ ನಗರವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಸನ್ಮಾನ ಏರ್ಪಡಿಸಲಾಗಿದೆ.ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಪ್ರಥಮ ದ್ವಿತೀಯ ಬಂದವರಿಗೆ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಇಟ್ಟಿರುವ ಬಡ್ಡಿ ಹಣದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.60 ವರ್ಷ ಆದವರಿಗೆ ವಾಕಿಂಗ್ ಸ್ಟಿಕ್ ನೀಡಲು ಯೋಜಿಸಲಾಗಿದೆ ಎಂದರು.

ಮೂರು ದಿನಗಳ ಕಾಲ ಉಚಿತವಾಗಿ ನಾಟಕೋತ್ಸವ ನಡೆಯಲಿದೆ. ಟಿವಿ,ಮೊಬೈಲ್‌ದಿಂದ ದೂರವಾಗಿ ಸಾಂಪ್ರದಾಯಿಕ ನಾಟಕ ಕಲೆಯತ್ತ ಜನರನ್ನು ಸೆಳೆಯುವ ಸಲುವಾಗಿ ಸಾಣೇಹಳ್ಳಿ ಮಠದ ಶಿವಕುಮಾರ ಕಲಾಸಂಘದ (ಶಿವಸಂಚಾರ) ತಂಡದಿಂದ ಮೂರು ದಿನಗಳ ನಾಟಕೋತ್ಸವ ಆಯೋಜಿಸಲಾಗಿದೆ. ಜ.19 ರಂದು ಜಂಗಮದೆಡೆಗೆ, ಜ.20 ರಂದು ಕಳ್ಳರಸಂತೆ, ಜ.21 ಶಿವಯೋಗಿ ಸಿದ್ಧರಾಮ ನಾಟಕಗಳು ಜರುಗಲಿವೆ.ಪ್ರತಿ ದಿನ ಸಂಜೆ 7ಕ್ಕೆ ಗವಿಸಿದ್ದೇಶ್ವರ ವೇದಿಕೆಯಲ್ಲಿ ಈ ನಾಟಕಗಳ ಪ್ರದರ್ಶನ ಇರಲಿದೆ ಎಂದು ತಿಳಿಸಿದರು.ಜ.21 ರಂದು ಬೆಳಗ್ಗೆ 8ಕ್ಕೆ ಹಡಲಗೇರಿಯ ಹುಲಿಗೆಮ್ಮ ದೇವಿ ಭಜನಾ ಮಂಡಳಿಯಿದ ತತ್ವಪದಗಳ ಭಜನಾಂಜಲಿ ಕಾರ್ಯಕ್ರಮ ನಡೆಯಲಿದೆ.ಪೂಜ್ಯರು ಬಿಟ್ಟರೆ ಬೇರೆ ಯಾವ ವ್ಯಕ್ತಿಗಳ ವೈಭವೀಕರಣ ಇರುವುದಿಲ್ಲ.ಧಾರ್ಮಿಕ ಆಧ್ಯಾತ್ಮಿಕ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.

ಪೂರ್ವಭಾವಿ ಸಭೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಗಣ್ಯರಾದ ಎಂ.ಬಿ.ನಾವದಗಿ, ಬಿ.ವಿ.ಕೋರಿ, ಮಾತನಾಡಿದರು.

ಕೆಯುಸಿ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್,ಜಿಒಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಹೂಗಾರ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ, ಶರಣು ಸಜ್ಜನ,ಬಸವರಾಜ ದಡ್ಡಿ, ಬಸವರಾಜ ಲಿಂಗದಳ್ಳಿ , ರಾಮಚಂದ್ರ ಹೆಗಡೆ,ಬಾಪುಗೌಡ ಪೀರಾಪೂರ,ಎಂ.ಡಿ.ಕುಂಬಾರ,ರಾಜುಗೌಡ ಗೌಡರ,ಅರವಿಂದ ಕಾಶಿನಕುಂಟಿ,ವೀರೇಶ ಢವಳಗಿ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ