ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ.

ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ ಶಾಲೆಗೆ ಸ್ವಾಗತಿಸಿಕೊಂಡರು.

ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾ(ವೆAಕಟೇಶ ನಗರ)ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಕೊಠಡಿ ಉದ್ಘಾಟನೆಯನ್ನು ಮುದ್ದೇಬಿಹಾಳ ತಹಶೀಲ್ದಾರ್ ಕೀರ್ತಿ ಚಾಲಕ್ ,ಬಿಇಒ ಬಿ.ಎಸ್.ಸಾವಳಗಿ ಜಂಟಿಯಾಗಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ತಹಶೀಲ್ದಾರ ಚಾಲಕ್ ಅವರು, ಸರ್ಕಾರ ಈ ವರ್ಷದಿಂದ ಪ್ರಾಥಮಿಕ ಶಾಲೆಗಳಲ್ಲೇ ಎಲ್.ಕೆ.ಜಿ.,ಯುಕೆಜಿ ತರಗತಿಗಳನ್ನು ಆರಂಭಿಸಿದ್ದು ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಮಾತನಾಡಿ, ಮುದ್ದೇಬಿಹಾಳ ಶೈಕ್ಷಣಿಕ ತಾಲ್ಲೂಕು ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಸದಾ ಮುಂದೆ ಇದೆ.ಪ್ರಾಥಮಿಕ ವಿಭಾಗದಲ್ಲಾಗಲೀ,ಪ್ರೌಢ ವಿಭಾಗದಲ್ಲಾಗಲೀ ಶಿಕ್ಷಕರ ಪರಿಶ್ರಮದಿಂದ ಉತ್ತಮ ಫಲಿತಾಂಶ ಬರುತ್ತಿದೆ.ಪ್ರಾಥಮಿಕ ಹಂತದಲ್ಲಿ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ 24 ವಿದ್ಯಾರ್ಥಿಗಳು ಕಳೆದ ವರ್ಷ ಆಯ್ಕೆಯಾಗಿದ್ದರೆ ಈ ವರ್ಷದಲ್ಲಿ 48 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.ಶಾಲೆಯ ಆರಂಭದ ದಿನದಿಂದಲೇ ಮಕ್ಕಳಿಗೆ ಮೊಟ್ಟೆ, ಹಾಲು, ಬಾಳೆಹಣ್ಣು, ಬಿಸಿಯೂಟ ಕೊಡುವ ವ್ಯವಸ್ಥೆ ಕೈಗೊಂಡಿದ್ದೇವೆ ಎಂದು ಹೇಳಿದರು.
ಬಿ.ಆರ್.ಸಿ ಆರ್.ಬಿ.ಧಮ್ಮೂರಮಠ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎo.ಬೆಳಗಲ್ಲ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸನಗೌಡ ಮುದ್ನೂರ, ಪಿಡಿಒ ಅರವಿಂದ ಲೋನಾರಮಠ,ಗ್ರಾಪಂ ಮಾಜಿ ಸದಸ್ಯ ಶಿವಾನಂದ ಲಮಾಣಿ, ನಿವೃತ್ತ ಮುಖ್ಯಗುರು ಲಿಂಬಾಜಿ ನಾಯಕ, ಮಾಜಿ ಸದಸ್ಯ ಥಾವರಪ್ಪ ಜಾಧವ, ಶಾಲೆಯ ಮುಖ್ಯಗುರು ಮಾನಸಿಂಗ ಎನ್ ಚವ್ಹಾಣ,ಶಾಲೆಯ ಶಿಕ್ಷಕರು,ಊರಿನ ಗಣ್ಯರು ಇದ್ದರು.ಗ್ರಾಮ ಆಡಳಿತಾಧಿಕಾರಿ ಮನೋಜ ರಾಠೋಡ, ಗುಂಡು ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು.ಶಾಲಾ ಮಕ್ಕಳ ಮೇಲೆ ಅಧಿಕಾರಿಗಳು ಪುಷ್ಪವೃಷ್ಟಿಗೈದು ಸ್ವಾಗತಿಸಿಕೊಂಡರು.ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಯಿತು.

Latest News

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.