Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ

ಬಕ್ರೀದ್ ಹಬ್ಬದ ಹಿನ್ನಲೆ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಬಕ್ರೀದ್ ಹಬ್ಬದ ಹಿನ್ನಲೆ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಕುಳಗೇರಿ ಕ್ರಾಸ್: ಸ್ಥಳೀಯ ರಾಮದುರ್ಗ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಲಿ ಈದುಲ್ ದುವಾ ಪ್ರಾರ್ಥನೆ ನಡೆಸಲಾಯಿತು.

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು ಹೋದ ಪೊಲೀಸ್ ಪೇದೆಗೂ ಒಳಪೆಟ್ಟಾಗಿರುವ ಘಟನೆ ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಪಟ್ಟಣದಲ್ಲಿ ಮೂರು ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮಂಗಳವಾರ ಸಂಜೆ ತೆರೆ ಬಿದ್ದಿತು. 5 ದಿನಗಳವರೆಗೆ ಜರುಗಿದ ಈ ಜಾತ್ರೋತ್ಸವಲ್ಲಿ ದ್ಯಾಮವ್ವನ ಕಟ್ಟೆಯಲ್ಲಿ ಶಾರದಾ ದೇವಿ, ಮಧ್ಯೆದಲ್ಲಿ ಗ್ರಾಮದೇವತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಾಡಿನ ವಿವಿಧ ಕಡೆಗಳಿಂದ ಬಂದ ಲಕ್ಷಾಂತರ ಭಕ್ತರು ತಮ್ಮ ಭಕ್ತಿ ಸಮರ್ಪಿಸಿ ಧನ್ಯತೆ ಮೆರೆದರು. ಮಂಗಲೋತ್ಸವ ದಿನದಂದು ಶಾರದಾದೇವಿ ಹಾಗೂ ಗ್ರಾಮದೇವತೆಯ ಮೂರ್ತಿಗಳನ್ನು ವಾದ್ಯ ವೈಭವಗಳೊಂದಿಗೆ ಮೆರವಣಿಗೆ ನಡೆಸಿ ಮೂಲ ಸ್ಥಳಕ್ಕೆ ಕಳಿಸಿಕೊಡಲಾಯಿತು.