Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.