ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.


ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ ವಿವಾದ.
ನರೇಗಾದಡಿ ಕ್ರೀಯಾ ಯೋಜನೆಯಲ್ಲಿ ನಾನಾ ಕಾಮಗಾರಿ ಮತ್ತು ರೈತರಿಗೆ ಸಂಭAದಿಸಿದ ಜಮೀನುಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕರೆದಿದ್ದ ಸಭೆಯಲ್ಲಿ ರೊಚ್ಚಿಗೆದ್ದ ಮಹಿಳೆಯರು ಸಮೇತ ಗ್ರಾಮದಲ್ಲಿ ನಿಜವಾದ ಬಡವರಿಗೆ ಮನೆಗಳಿಲ್ಲ, ಇದ್ದವರಿಗೇ ಮನೆ ಕೊಟ್ಟಿದ್ದೀರಿ, ರಸ್ತೆಗಳ ಹೆಸರಲ್ಲಿ ಮೇಲಿಂದ ಮೇಲೆ ಬಿಲ್ ತಗೆಯಲಾಗಿದೆ ಹಿಂದಿನ ವರ್ಷ ಹಲವು ಕಾಮಗಾರಿಗೆ ರೈತರು ಅರ್ಜಿ ಸಲ್ಲಿಸಿದ್ದಾರೆ ಅವುಗಳನ್ನು ತಗೆದುಹಾಕಲಾಗಿದೆ ಮೊದಲು ಉತ್ತರ ನೀಡಿ ಎಂದು ಪಟ್ಟು ಹಿಡಿದರು.
ದರ್ಶನ: ಗ್ರಾಮದ ಅಂಗನವಾಡಿ ಕೇಂದ್ರದ ಸುತ್ತಲೂ ಅನೈರ್ಮಲ್ಯವಿದೆ, ನಿತ್ಯ ಮಕ್ಕಳು ಕಲಿಯಲು ಹಿಂಜೆರೆಯುವAತಾಗಿದೆ,ಚರAಡಿ ನೀರು ರಸ್ತೆಯಲ್ಲೇ ಹರಿದು ಮನೆಯೊಳಗೆ ನುಂಗುತ್ತಿದೆ, ಕೆಸರು ಗದ್ದೆಯಂತಾದ ಗ್ರಾಮದಲ್ಲಿ ವಾಸ ಮಾಡುತ್ತಿದ್ದು ಈವರೆಗೂ ನಮ್ಮ ಸಂಕಷ್ಟ ಯಾರೂ ಆಲಿಸಿಲ್ಲ ಎಂದು ಅಳಲು ತೋಡಿಕೊಂಡರು.
ಭರವಸೆ: ಗ್ರಾಮದ ಹಲವು ನಿವಾಸಿಗಳು ಹೊಸದಾಗಿ ಮನೆ ನಿರ್ಮಿಸಿಕೊಂಡಿದ್ದರು ರಸ್ತೆಗಳ ನಿರ್ಮಾಣವಾಗಿಲ್ಲ ಎಂದ ಸ್ಥಳಕ್ಕೆ ಪರಿಶೀಲನೆ ನಡೆಸಿದ ಗ್ರಾ.ಪಂ ಅಧ್ಯಕ್ಷರಾದ ಸಿದ್ರಾಮಪ್ಪ ಮೇಟಿ, ಉಪಾಧ್ಯಕ್ಷರು ಹಾಗೂ ಪಿಡಿಓ ಅವರು ತಕ್ಷಣವೇ ಈ ವರ್ಷ ರಸ್ತೆಗಳ ನಿರ್ಮಾಣಕ್ಕೆ ಕ್ರೀಯಾ ಯೋಜನೆ ಹಾಕಿಕೊಳ್ಳುತ್ತೇವೆ ಎಂದು ಭರವಸೆ ನಿಡಿದರು.
ಈ ವೇಳೆ ಪಿಡಿಓ ರಾಜು ನಾರಾಯಣ, ಅಧ್ಯಕ್ಷರಾದ ಸಿದ್ದರಾಮಪ್ಪ ಮೇಟಿ, ಉಪಾದ್ಯಕ್ಷರಾದ ಪ್ರೇಮಾ ಚಲವಾದಿ, ಪರಮವ್ವ ಪಾಟೀಲ, ಕಾರ್ಯದರ್ಶಿ ಅಯ್ಯಪ್ಪ ಮಲಗಲದಿನ್ನಿ ಸೇರಿದಂತೆ ಗ್ರಾಮಸ್ಥರಿದ್ದರು.

ವರದಿ: ಶಿವು ರಾಠೋಡ

Latest News

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಬೆಳಗಾವಿ(ಸುವರ್ಣ ವಿಧಾನಸೌಧ ): ಕಾರ್ಯನಿರತ ಪತ್ರಕರ್ತರ ಸಂಘಟನೆಯವರು ಮುಂದಿರಿಸಿರುವ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದು

TP, ZP Election: ತಾಪಂ, ಜಿಪಂ ಚುನಾವಣೆಗೆ ಮೂಹುರ್ತ ನಿಗದಿ

TP, ZP Election: ತಾಪಂ, ಜಿಪಂ ಚುನಾವಣೆಗೆ ಮೂಹುರ್ತ ನಿಗದಿ

ಬೆಂಗಳೂರು: ​ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಪ್ರಸ್ತುತ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದ್ದು, ಅದರ ಚುನಾವಣಾ ಭರವಸೆಯಾದ 'ಐದು ಗ್ಯಾರಂಟಿ' ಯೋಜನೆಗಳ ಅನುಷ್ಠಾನವು ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ​ಆಡಳಿತದ ಪ್ರಮುಖ ಕೇಂದ್ರ: ಐದು ಗ್ಯಾರಂಟಿಗಳು ​'ಶಕ್ತಿ' (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ), 'ಗೃಹ ಲಕ್ಷ್ಮಿ' (ಮಹಿಳಾ ಮುಖ್ಯಸ್ಥರಿಗೆ ಮಾಸಿಕ