1.05 crore profit for Sharan Veereshwar Pattana Cooperative Bank.. 12% dividend declared

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ನಾಲತವಾಡ / ಮುದ್ದೇಬಿಹಾಳ : ಗ್ರಾಮೀಣ ಭಾಗದ ಜನರು ದೊಡ್ಡ ದೊಡ್ಡ ಪಟ್ಟಣಗಳಿಗೆ ತೆರಳಿ ತಮ್ಮ ಹಣಕಾಸು ಚಟುವಟಿಕೆಗಳನ್ನು ನಿರ್ವಹಿಸಿಕೊಳ್ಳಲು ಹೋಗುವ ತೊಂದರೆ ನಿವಾರಣೆಗೆ ನಾಲತವಾಡದಂತಹ ಸಣ್ಣ ಪಟ್ಟಣ ಪ್ರದೇಶದಲ್ಲಿ ರಾಷ್ಟ್ರಿಕೃತ ಬ್ಯಾಂಕ್‌ಗಳಿಗೆ ಸರಿಸಮಾನ ಎನ್ನುವ ಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಮಾಡಿ ಜನರಿಗೆ ಉತ್ತಮ ಸೇವೆ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದು ಶ್ರೀ ಶರಣ ವೀರೇಶ್ವರ ಪಟ್ಟಣದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾಂಕಿನ 28ನೇ ವಾರ್ಷಿಕ ಮಹಾಸಭೆ,ಸಾಧಕರಿಗೆ ಹಾಗೂ ಬ್ಯಾಂಕಿನ ಉತ್ತಮ ಗ್ರಾಹಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸನ್ 2023-24ನೇ ಸಾಲಿನಲ್ಲಿ ಸಾಲ ವಸೂಲಾತಿ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರಿಂದ ಬ್ಯಾಂಕು ವರ್ಷಾಂತ್ಯಕ್ಕೆ 1.05 ಕೋಟಿ ರೂ.ಲಾಭ ಗಳಿಸಿದೆ.ಬ್ಯಾಂಕಿನ ಗ್ರಾಹಕರಿಗೆ ಶೇ.12ರಷ್ಟು ಲಾಭಾಂಶ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಬ್ಯಾಂಕಿನ ನಿರ್ದೇಶಕ ಬಿ.ಟಿ.ತಿರುಮುಖೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಡಿ.ಆರ್.ಮಳಖೇಡ ವರದಿ ವಾಚಿಸಿದರು.

ಬ್ಯಾಂಕಿನ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ನಿರ್ದೇಶಕರಾದ ಬಸಣ್ಣ ವಡಗೇರಿ, ನಂದಪ್ಪ ಗಂಗನಗೌಡರ, ಸಿದ್ರಾಮಪ್ಪ ಹಂಪನಗೌಡ್ರ, ಖಾಜಾಹುಸೇನ ಎತ್ತಿನಮನಿ, ಈಶ್ವರಪ್ಪ ಚಿನಿವಾಲರ, ಸುಭಾಷ ಡಿಗ್ಗಿ, ಉಮೇಶ ಇಲಕಲ್, ಬಾಲಪ್ಪ ಹಟ್ಟಿ, ಶ್ರೀದೇವಿ ಹುಮನಾಬಾದ, ಲಕ್ಷ್ಮೀ ಹಂಪನಗೌಡರ, ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ, ಉಪ ಪ್ರಧಾನ ವ್ಯವಸ್ಥಾಪಕ ಅಶೋಕ ಹಡಲಗೇರಿ, ವ್ಯವಸ್ಥಾಪಕ ಶರಣು ಕರಡಿ, ಸಲಹಾ ಸಮಿತಿ ಸದಸ್ಯರು, ನಾಲತವಾಡ, ಮುದ್ದೇಬಿಹಾಳ, ಲಿಂಗಸುಗೂರು, ಹುಣಸಗಿ, ತಾಳಿಕೋಟಿ ಶಾಖೆಗಳ ಸದಸ್ಯರು ಇದ್ದರು.

ಇದನ್ನೂ ಓದಿ: ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವ ಕಾನೂನು ರೂಪಿಸಿ: ಕರ್ನಾಟಕ ಮುಸ್ಲಿಂ ಫೋರಂ ಆಗ್ರಹ (ವಿಡಿಯೋ ನೋಡಿ)

ರಾಜು ಹಾದಿಮನಿ ನಿರೂಪಿಸಿದರು. ವಿ.ಎಸ್.ಮಳಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ವಾಣಿಜ್ಯೋದ್ಯಮ ವಾಣಿಜ್ಯ ರತ್ನ ಪ್ರಶಸ್ತಿ ಪಡೆದ ಮುದ್ದೇಬಿಹಾಳದ ಉದ್ಯಮಿ ಶರಣು ಸಜ್ಜನ ಅವರನ್ನು ಹಾಗೂ ಶೇರು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ