1.05 crore profit for Sharan Veereshwar Pattana Cooperative Bank.. 12% dividend declared

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ನಾಲತವಾಡ / ಮುದ್ದೇಬಿಹಾಳ : ಗ್ರಾಮೀಣ ಭಾಗದ ಜನರು ದೊಡ್ಡ ದೊಡ್ಡ ಪಟ್ಟಣಗಳಿಗೆ ತೆರಳಿ ತಮ್ಮ ಹಣಕಾಸು ಚಟುವಟಿಕೆಗಳನ್ನು ನಿರ್ವಹಿಸಿಕೊಳ್ಳಲು ಹೋಗುವ ತೊಂದರೆ ನಿವಾರಣೆಗೆ ನಾಲತವಾಡದಂತಹ ಸಣ್ಣ ಪಟ್ಟಣ ಪ್ರದೇಶದಲ್ಲಿ ರಾಷ್ಟ್ರಿಕೃತ ಬ್ಯಾಂಕ್‌ಗಳಿಗೆ ಸರಿಸಮಾನ ಎನ್ನುವ ಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಮಾಡಿ ಜನರಿಗೆ ಉತ್ತಮ ಸೇವೆ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದು ಶ್ರೀ ಶರಣ ವೀರೇಶ್ವರ ಪಟ್ಟಣದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾಂಕಿನ 28ನೇ ವಾರ್ಷಿಕ ಮಹಾಸಭೆ,ಸಾಧಕರಿಗೆ ಹಾಗೂ ಬ್ಯಾಂಕಿನ ಉತ್ತಮ ಗ್ರಾಹಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸನ್ 2023-24ನೇ ಸಾಲಿನಲ್ಲಿ ಸಾಲ ವಸೂಲಾತಿ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರಿಂದ ಬ್ಯಾಂಕು ವರ್ಷಾಂತ್ಯಕ್ಕೆ 1.05 ಕೋಟಿ ರೂ.ಲಾಭ ಗಳಿಸಿದೆ.ಬ್ಯಾಂಕಿನ ಗ್ರಾಹಕರಿಗೆ ಶೇ.12ರಷ್ಟು ಲಾಭಾಂಶ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಬ್ಯಾಂಕಿನ ನಿರ್ದೇಶಕ ಬಿ.ಟಿ.ತಿರುಮುಖೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಡಿ.ಆರ್.ಮಳಖೇಡ ವರದಿ ವಾಚಿಸಿದರು.

ಬ್ಯಾಂಕಿನ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ನಿರ್ದೇಶಕರಾದ ಬಸಣ್ಣ ವಡಗೇರಿ, ನಂದಪ್ಪ ಗಂಗನಗೌಡರ, ಸಿದ್ರಾಮಪ್ಪ ಹಂಪನಗೌಡ್ರ, ಖಾಜಾಹುಸೇನ ಎತ್ತಿನಮನಿ, ಈಶ್ವರಪ್ಪ ಚಿನಿವಾಲರ, ಸುಭಾಷ ಡಿಗ್ಗಿ, ಉಮೇಶ ಇಲಕಲ್, ಬಾಲಪ್ಪ ಹಟ್ಟಿ, ಶ್ರೀದೇವಿ ಹುಮನಾಬಾದ, ಲಕ್ಷ್ಮೀ ಹಂಪನಗೌಡರ, ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ, ಉಪ ಪ್ರಧಾನ ವ್ಯವಸ್ಥಾಪಕ ಅಶೋಕ ಹಡಲಗೇರಿ, ವ್ಯವಸ್ಥಾಪಕ ಶರಣು ಕರಡಿ, ಸಲಹಾ ಸಮಿತಿ ಸದಸ್ಯರು, ನಾಲತವಾಡ, ಮುದ್ದೇಬಿಹಾಳ, ಲಿಂಗಸುಗೂರು, ಹುಣಸಗಿ, ತಾಳಿಕೋಟಿ ಶಾಖೆಗಳ ಸದಸ್ಯರು ಇದ್ದರು.

ಇದನ್ನೂ ಓದಿ: ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವ ಕಾನೂನು ರೂಪಿಸಿ: ಕರ್ನಾಟಕ ಮುಸ್ಲಿಂ ಫೋರಂ ಆಗ್ರಹ (ವಿಡಿಯೋ ನೋಡಿ)

ರಾಜು ಹಾದಿಮನಿ ನಿರೂಪಿಸಿದರು. ವಿ.ಎಸ್.ಮಳಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ವಾಣಿಜ್ಯೋದ್ಯಮ ವಾಣಿಜ್ಯ ರತ್ನ ಪ್ರಶಸ್ತಿ ಪಡೆದ ಮುದ್ದೇಬಿಹಾಳದ ಉದ್ಯಮಿ ಶರಣು ಸಜ್ಜನ ಅವರನ್ನು ಹಾಗೂ ಶೇರು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು