1.9 crore profit for Nalatwada Veereshwar Cooperative Bank

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ವೀರೇಶ್ವರ ಬ್ಯಾಂಕಿನಿಂದ ಶೀಘ್ರ ಎಟಿಎಂ ಸೇವೆ- ಎಂ.ಎಸ್.ಪಾಟೀಲ್

ನಾಲತವಾಡ : ಆರಂಭದಲ್ಲಿ 1167 ಶೇರು ಸದಸ್ಯರೊಂದಿಗೆ ಕೇವಲ 8.67 ಲಕ್ಷ ಬಂಡವಾಳದೊದಿಗೆ ಆರಂಭಗೊಡ ಇಲ್ಲಿನ ಶ್ರೀ ಶರಣ ವೀರೇಶ್ವರ ಸಹಕಾರಿ ಬ್ಯಾಂಕು ಸದ್ಯಕ್ಕೆ 5608 ಶೇರು ಸದಸ್ಯರನ್ನು ಹೊಂದಿದ್ದು ಆರ್ಥಿಕ ವರ್ಷಾಂತ್ಯಕ್ಕೆ 1.09 ಕೋಟಿ ರೂ. ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು.

ಪಟ್ಟಣದ ರತ್ನಸಂಗಮ ಕಲ್ಯಾಣ ಮಂಟಪದಲ್ಲಿ 29ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕಿನಿಂದ ಐದು ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಕೋರ್ ಬ್ಯಾಂಕಿಂಗ್ ವ್ಯವಸ್ಥೆ, ಆರ್.ಟಿ.ಜಿ.ಎಸ್, ನೆಫ್ಟ್, ಎಸ್.ಎಂ.ಎಸ್.ಸೇವೆ, ಇ ಸ್ಟಾಂಪಿಂಗ್, ಸೇಫ್ ಲಾಕರ್ ವ್ಯವಸ್ಥೆ ಹೊಂದಿ ಉತ್ತಮ ಸೇವೆ ನೀಡುತ್ತಿದ್ದು ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಎಟಿಎಂ ಸೇವೆ ಆರಂಭಿಸಲಾಗುವುದು ಎಂದರು.

ನಿವೃತ್ತ ಉಪನ್ಯಾಸಕ ಸಿ.ಎಸ್.ರೇವಡಿ, ವೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚರ‍್ಯ ಡಿ. ಆರ್. ಮಳಖೇಡ ಮಾತನಾಡಿ, ಬ್ಯಾಂಕಿನ ಆರ್ಥಿಕ ಸ್ಥಿತಿಗತಿ ಉತ್ತಮವಾಗಿರಬೇಕಾದರೆ ಸಿಬ್ಬಂದಿಯ ಕಾರ್ಯಕ್ಷಮತೆ, ಸಾಲ ವಸೂಲಾತಿಯಲ್ಲಿ ತೋರುವ ನಿರ್ಧಾರಗಳು ಮಹತ್ವದ ಪಾತ್ರ ವಹಿಸುತ್ತವೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದಿಯಾಗಿ ಪ್ರತಿಯೊಬ್ಬರೂ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಬ್ಯಾಂಕ್‌ನ ಸದಸ್ಯ ಬಸವರಾಜ ತಿರುಮುಖೆ ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಹೊಸ ಶಾಖೆಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡ್ರ ವರದಿ ವಾಚಿಸಿ, ಬ್ಯಾಂಕಿನ ಪ್ರಗತಿಗೆ ಸಿಬ್ಬಂದಿ ಹೊಂದಾಣಿಕೆ, ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹದಿಂದ ಬ್ಯಾಂಕು ಪ್ರಗತಿಯತ್ತ ಸಾಗಿದೆ. ಲಿಂಗಸೂರು ಶಾಖೆಗೆ ಹೊಸ ಕಟ್ಟಡ ನಿರ್ಮಿಸಲು ಜಾಗೆ ಖರೀದಿಸಲಾಗಿದೆ ಎಂದು ತಿಳಿಸಿದರು.

ಸನ್ಮಾನ: ಪಟ್ಟಣದ ಸೇರಿ ಲಿಂಗಸ್ಗೂರ, ಮುದ್ದೇಬಿಹಾಳ, ಹುಣಸಗಿ, ಮುದ್ದೇಬಿಹಾಳ ಶಾಖೆಯಲ್ಲಿ ಉತ್ತಮ ಗ್ರಾಹಕರನ್ನು ಮತ್ತು ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಸೇವೆ ಸಲ್ಲಿಸುತ್ತೀರುವ ತಜ್ಞ ವೈದ್ಯರಾದ ಡಾ.ರಂಗನಾಥ್ ವೈದ್ಯ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಲಬುರ್ಗಿಯ ಶರಣಬಸಪ್ಪ ಅಪ್ಪಾ ಮತ್ತು ಅಹ್ಮದಬಾದ್ ವಿಮಾನ ದುರಂತ, ಬ್ಯಾಂಕಿನ ಸದಸ್ಯ ದಿ.ಸಂಗಪ್ಪ ಚಿನಿವಾಲರ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ಸದಸ್ಯರಾದ ಬಸವರಾಜ ತಾಳಿಕೋಟಿ, ಬಸವಂತಪ್ಪ ಗಂಗನಗೌಡ್ರ, ಸಂಗಣ್ಣ ಹಡಲಗೇರಿ, ಎಸ್. ಎಸ್. ಸ್ಥಾವರಮಠ, ಕೆ. ಆರ್. ಎತ್ತಿನಮನಿ, ಗುರುಸಂಗಪ್ಪ ಗಡೇದ, ಬಾಲಪ್ಪ ಹಟ್ಟಿ, ಸುಮಿತ್ರಾ ದೇಶಮುಖ, ಭಾರತಿ ಮೇಟಿ(ಪಾಟೀಲ), ಎಸ್.ಎಸ್.ಮಣ್ಣೂರ, ಈಶ್ವರಪ್ಪ ಚಿನಿವಾಲರ, ಅಶೋಕ ಹಡಲಗೇರಿ, ಶರಣಪ್ಪ ಕರಡಿ ಇದ್ದರು. ನಂದಿತಾ ಶೀಲವಂತರ ಹಾಗೂ ಯಮುನಾ ಅವರ ಪ್ರಾರ್ಥನೆ ಭರತನಾಟ್ಯ ಗಮನ ಸೆಳೆಯಿತು. ಶಿಕ್ಷಕ ಹೀರೂ ನಾಯಕ ರೈತ ಗೀತೆ ಹಾಡಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ