1.9 crore profit for Nalatwada Veereshwar Cooperative Bank

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ವೀರೇಶ್ವರ ಬ್ಯಾಂಕಿನಿಂದ ಶೀಘ್ರ ಎಟಿಎಂ ಸೇವೆ- ಎಂ.ಎಸ್.ಪಾಟೀಲ್

ನಾಲತವಾಡ : ಆರಂಭದಲ್ಲಿ 1167 ಶೇರು ಸದಸ್ಯರೊಂದಿಗೆ ಕೇವಲ 8.67 ಲಕ್ಷ ಬಂಡವಾಳದೊದಿಗೆ ಆರಂಭಗೊಡ ಇಲ್ಲಿನ ಶ್ರೀ ಶರಣ ವೀರೇಶ್ವರ ಸಹಕಾರಿ ಬ್ಯಾಂಕು ಸದ್ಯಕ್ಕೆ 5608 ಶೇರು ಸದಸ್ಯರನ್ನು ಹೊಂದಿದ್ದು ಆರ್ಥಿಕ ವರ್ಷಾಂತ್ಯಕ್ಕೆ 1.09 ಕೋಟಿ ರೂ. ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು.

ಪಟ್ಟಣದ ರತ್ನಸಂಗಮ ಕಲ್ಯಾಣ ಮಂಟಪದಲ್ಲಿ 29ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕಿನಿಂದ ಐದು ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಕೋರ್ ಬ್ಯಾಂಕಿಂಗ್ ವ್ಯವಸ್ಥೆ, ಆರ್.ಟಿ.ಜಿ.ಎಸ್, ನೆಫ್ಟ್, ಎಸ್.ಎಂ.ಎಸ್.ಸೇವೆ, ಇ ಸ್ಟಾಂಪಿಂಗ್, ಸೇಫ್ ಲಾಕರ್ ವ್ಯವಸ್ಥೆ ಹೊಂದಿ ಉತ್ತಮ ಸೇವೆ ನೀಡುತ್ತಿದ್ದು ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಎಟಿಎಂ ಸೇವೆ ಆರಂಭಿಸಲಾಗುವುದು ಎಂದರು.

ನಿವೃತ್ತ ಉಪನ್ಯಾಸಕ ಸಿ.ಎಸ್.ರೇವಡಿ, ವೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚರ‍್ಯ ಡಿ. ಆರ್. ಮಳಖೇಡ ಮಾತನಾಡಿ, ಬ್ಯಾಂಕಿನ ಆರ್ಥಿಕ ಸ್ಥಿತಿಗತಿ ಉತ್ತಮವಾಗಿರಬೇಕಾದರೆ ಸಿಬ್ಬಂದಿಯ ಕಾರ್ಯಕ್ಷಮತೆ, ಸಾಲ ವಸೂಲಾತಿಯಲ್ಲಿ ತೋರುವ ನಿರ್ಧಾರಗಳು ಮಹತ್ವದ ಪಾತ್ರ ವಹಿಸುತ್ತವೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದಿಯಾಗಿ ಪ್ರತಿಯೊಬ್ಬರೂ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಬ್ಯಾಂಕ್‌ನ ಸದಸ್ಯ ಬಸವರಾಜ ತಿರುಮುಖೆ ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಹೊಸ ಶಾಖೆಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡ್ರ ವರದಿ ವಾಚಿಸಿ, ಬ್ಯಾಂಕಿನ ಪ್ರಗತಿಗೆ ಸಿಬ್ಬಂದಿ ಹೊಂದಾಣಿಕೆ, ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹದಿಂದ ಬ್ಯಾಂಕು ಪ್ರಗತಿಯತ್ತ ಸಾಗಿದೆ. ಲಿಂಗಸೂರು ಶಾಖೆಗೆ ಹೊಸ ಕಟ್ಟಡ ನಿರ್ಮಿಸಲು ಜಾಗೆ ಖರೀದಿಸಲಾಗಿದೆ ಎಂದು ತಿಳಿಸಿದರು.

ಸನ್ಮಾನ: ಪಟ್ಟಣದ ಸೇರಿ ಲಿಂಗಸ್ಗೂರ, ಮುದ್ದೇಬಿಹಾಳ, ಹುಣಸಗಿ, ಮುದ್ದೇಬಿಹಾಳ ಶಾಖೆಯಲ್ಲಿ ಉತ್ತಮ ಗ್ರಾಹಕರನ್ನು ಮತ್ತು ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಸೇವೆ ಸಲ್ಲಿಸುತ್ತೀರುವ ತಜ್ಞ ವೈದ್ಯರಾದ ಡಾ.ರಂಗನಾಥ್ ವೈದ್ಯ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಲಬುರ್ಗಿಯ ಶರಣಬಸಪ್ಪ ಅಪ್ಪಾ ಮತ್ತು ಅಹ್ಮದಬಾದ್ ವಿಮಾನ ದುರಂತ, ಬ್ಯಾಂಕಿನ ಸದಸ್ಯ ದಿ.ಸಂಗಪ್ಪ ಚಿನಿವಾಲರ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ಸದಸ್ಯರಾದ ಬಸವರಾಜ ತಾಳಿಕೋಟಿ, ಬಸವಂತಪ್ಪ ಗಂಗನಗೌಡ್ರ, ಸಂಗಣ್ಣ ಹಡಲಗೇರಿ, ಎಸ್. ಎಸ್. ಸ್ಥಾವರಮಠ, ಕೆ. ಆರ್. ಎತ್ತಿನಮನಿ, ಗುರುಸಂಗಪ್ಪ ಗಡೇದ, ಬಾಲಪ್ಪ ಹಟ್ಟಿ, ಸುಮಿತ್ರಾ ದೇಶಮುಖ, ಭಾರತಿ ಮೇಟಿ(ಪಾಟೀಲ), ಎಸ್.ಎಸ್.ಮಣ್ಣೂರ, ಈಶ್ವರಪ್ಪ ಚಿನಿವಾಲರ, ಅಶೋಕ ಹಡಲಗೇರಿ, ಶರಣಪ್ಪ ಕರಡಿ ಇದ್ದರು. ನಂದಿತಾ ಶೀಲವಂತರ ಹಾಗೂ ಯಮುನಾ ಅವರ ಪ್ರಾರ್ಥನೆ ಭರತನಾಟ್ಯ ಗಮನ ಸೆಳೆಯಿತು. ಶಿಕ್ಷಕ ಹೀರೂ ನಾಯಕ ರೈತ ಗೀತೆ ಹಾಡಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ