1.9 crore profit for Nalatwada Veereshwar Cooperative Bank

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ವೀರೇಶ್ವರ ಬ್ಯಾಂಕಿನಿಂದ ಶೀಘ್ರ ಎಟಿಎಂ ಸೇವೆ- ಎಂ.ಎಸ್.ಪಾಟೀಲ್

ನಾಲತವಾಡ : ಆರಂಭದಲ್ಲಿ 1167 ಶೇರು ಸದಸ್ಯರೊಂದಿಗೆ ಕೇವಲ 8.67 ಲಕ್ಷ ಬಂಡವಾಳದೊದಿಗೆ ಆರಂಭಗೊಡ ಇಲ್ಲಿನ ಶ್ರೀ ಶರಣ ವೀರೇಶ್ವರ ಸಹಕಾರಿ ಬ್ಯಾಂಕು ಸದ್ಯಕ್ಕೆ 5608 ಶೇರು ಸದಸ್ಯರನ್ನು ಹೊಂದಿದ್ದು ಆರ್ಥಿಕ ವರ್ಷಾಂತ್ಯಕ್ಕೆ 1.09 ಕೋಟಿ ರೂ. ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು.

ಪಟ್ಟಣದ ರತ್ನಸಂಗಮ ಕಲ್ಯಾಣ ಮಂಟಪದಲ್ಲಿ 29ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕಿನಿಂದ ಐದು ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಕೋರ್ ಬ್ಯಾಂಕಿಂಗ್ ವ್ಯವಸ್ಥೆ, ಆರ್.ಟಿ.ಜಿ.ಎಸ್, ನೆಫ್ಟ್, ಎಸ್.ಎಂ.ಎಸ್.ಸೇವೆ, ಇ ಸ್ಟಾಂಪಿಂಗ್, ಸೇಫ್ ಲಾಕರ್ ವ್ಯವಸ್ಥೆ ಹೊಂದಿ ಉತ್ತಮ ಸೇವೆ ನೀಡುತ್ತಿದ್ದು ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಎಟಿಎಂ ಸೇವೆ ಆರಂಭಿಸಲಾಗುವುದು ಎಂದರು.

ನಿವೃತ್ತ ಉಪನ್ಯಾಸಕ ಸಿ.ಎಸ್.ರೇವಡಿ, ವೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚರ‍್ಯ ಡಿ. ಆರ್. ಮಳಖೇಡ ಮಾತನಾಡಿ, ಬ್ಯಾಂಕಿನ ಆರ್ಥಿಕ ಸ್ಥಿತಿಗತಿ ಉತ್ತಮವಾಗಿರಬೇಕಾದರೆ ಸಿಬ್ಬಂದಿಯ ಕಾರ್ಯಕ್ಷಮತೆ, ಸಾಲ ವಸೂಲಾತಿಯಲ್ಲಿ ತೋರುವ ನಿರ್ಧಾರಗಳು ಮಹತ್ವದ ಪಾತ್ರ ವಹಿಸುತ್ತವೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದಿಯಾಗಿ ಪ್ರತಿಯೊಬ್ಬರೂ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಬ್ಯಾಂಕ್‌ನ ಸದಸ್ಯ ಬಸವರಾಜ ತಿರುಮುಖೆ ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಹೊಸ ಶಾಖೆಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡ್ರ ವರದಿ ವಾಚಿಸಿ, ಬ್ಯಾಂಕಿನ ಪ್ರಗತಿಗೆ ಸಿಬ್ಬಂದಿ ಹೊಂದಾಣಿಕೆ, ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹದಿಂದ ಬ್ಯಾಂಕು ಪ್ರಗತಿಯತ್ತ ಸಾಗಿದೆ. ಲಿಂಗಸೂರು ಶಾಖೆಗೆ ಹೊಸ ಕಟ್ಟಡ ನಿರ್ಮಿಸಲು ಜಾಗೆ ಖರೀದಿಸಲಾಗಿದೆ ಎಂದು ತಿಳಿಸಿದರು.

ಸನ್ಮಾನ: ಪಟ್ಟಣದ ಸೇರಿ ಲಿಂಗಸ್ಗೂರ, ಮುದ್ದೇಬಿಹಾಳ, ಹುಣಸಗಿ, ಮುದ್ದೇಬಿಹಾಳ ಶಾಖೆಯಲ್ಲಿ ಉತ್ತಮ ಗ್ರಾಹಕರನ್ನು ಮತ್ತು ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಸೇವೆ ಸಲ್ಲಿಸುತ್ತೀರುವ ತಜ್ಞ ವೈದ್ಯರಾದ ಡಾ.ರಂಗನಾಥ್ ವೈದ್ಯ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಲಬುರ್ಗಿಯ ಶರಣಬಸಪ್ಪ ಅಪ್ಪಾ ಮತ್ತು ಅಹ್ಮದಬಾದ್ ವಿಮಾನ ದುರಂತ, ಬ್ಯಾಂಕಿನ ಸದಸ್ಯ ದಿ.ಸಂಗಪ್ಪ ಚಿನಿವಾಲರ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ಸದಸ್ಯರಾದ ಬಸವರಾಜ ತಾಳಿಕೋಟಿ, ಬಸವಂತಪ್ಪ ಗಂಗನಗೌಡ್ರ, ಸಂಗಣ್ಣ ಹಡಲಗೇರಿ, ಎಸ್. ಎಸ್. ಸ್ಥಾವರಮಠ, ಕೆ. ಆರ್. ಎತ್ತಿನಮನಿ, ಗುರುಸಂಗಪ್ಪ ಗಡೇದ, ಬಾಲಪ್ಪ ಹಟ್ಟಿ, ಸುಮಿತ್ರಾ ದೇಶಮುಖ, ಭಾರತಿ ಮೇಟಿ(ಪಾಟೀಲ), ಎಸ್.ಎಸ್.ಮಣ್ಣೂರ, ಈಶ್ವರಪ್ಪ ಚಿನಿವಾಲರ, ಅಶೋಕ ಹಡಲಗೇರಿ, ಶರಣಪ್ಪ ಕರಡಿ ಇದ್ದರು. ನಂದಿತಾ ಶೀಲವಂತರ ಹಾಗೂ ಯಮುನಾ ಅವರ ಪ್ರಾರ್ಥನೆ ಭರತನಾಟ್ಯ ಗಮನ ಸೆಳೆಯಿತು. ಶಿಕ್ಷಕ ಹೀರೂ ನಾಯಕ ರೈತ ಗೀತೆ ಹಾಡಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ