10.33 lakhs profit for Koluru Agricultural Co-operative Society

ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ

ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ

ಮುದ್ದೇಬಿಹಾಳ : ರೈತರ ಸಹಕಾರದಿಂದ ಈ ಸಾಲಿನ ಆರ್ಥಿಕ ವರ್ಷ ಅಂತ್ಯಗೊಂಡ ಅವಧಿಯವರೆಗೆ ಸಂಘವು ಒಟ್ಟು 10.33 ಲಕ್ಷ ಲಾಭ ಗಳಿಸಿದೆ ಎಂದು ತಾಲ್ಲೂಕಿನ ಕೋಳೂರು ಎಲ್.ಟಿ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಸೀತಿಮನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕು ಕೋಳೂರು ತಾಂಡಾದ ದುರ್ಗಾದೇವಿ ಸಂತ ಸೇವಾಲಾಲ್ ಅವರ ದೇವಸ್ಥಾನದಲ್ಲಿ ಶನಿವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಸಹಕಾರಿ ಸಂಘದ ಬೆಳವಣಿಗೆಗೆ ರೈತರು ಕಾರಣರಾಗಿದ್ದು ಸಂಘಕ್ಕೆ ಭಾರವಾಗದಂತೆ ತಮ್ಮಿಂದಲೂ ದೇಣಿಗೆ ನೀಡಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ ಸಂಘದ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲು ಸಚಿವರು, ವಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ್ ಅವರನ್ನು ಕರೆಯಿಸಲಾಗುತ್ತದೆ. ವಿವಿಧ ಮಠಗಳ ಸ್ವಾಮೀಜಿಗಳನ್ನು ಆಹ್ವಾನಿಸಲಾಗುತ್ತದೆ. ಇದಕ್ಕೆ ರೈತರ ಸಹಕಾರ ಅಗತ್ಯವಾಗಿದೆ ಎಂದರು.

ತಾಂಡಾದ ಮುಖಂಡ ರವಿ ನಾಯಕ ಮಾತನಾಡಿ, ನಿಸ್ವಾರ್ಥ ಸೇವೆ ಸಲ್ಲಿಸಿದ್ದರಿಂದಲೇ ಇಂದು ಸಂಘವು ಪ್ರಗತಿಯತ್ತ ಸಾಗಿದೆ. ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಸಂಘದ ಕಟ್ಟಡದ ಉದ್ಘಾಟನಾ ಸಮಾರಂಭ ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ಲೆಕ್ಕಪತ್ರವನ್ನು ಅಶೋಕ ಲಮಾಣಿ ಓದಿದರು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ನಿರ್ದೇಶಕರಾದ ಅಯ್ಯಪ್ಪ ಬಿದರಕುಂದಿ, ಯಲಗೂರದಪ್ಪ ಝಳಕಿ, ಭೀಮಪ್ಪ ವಾಲೀಕಾರ,ಮಲ್ಲಪ್ಪ ತಾರನಾಳ, ಚನ್ನಬಸಪ್ಪ ಕೋಳೂರ, ರೀತಿಬಾಯಿ ಲಮಾಣಿ, ಮಲ್ಲಮ್ಮ ಹಳ್ಳೂರ, ಗುರುಬಾಯಿ ಜಾಧವ,ಚೆನ್ನವ್ವ ಬಯ್ಯಾಪೂರ, ಹೋಬಾ ನಾಯಕ ಧರ್ಮಗಿರಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಂಗಯ್ಯ ಹೊನ್ನಳ್ಳಿ ಇದ್ದರು.

ಇದನ್ನೂ ಓದಿ: ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ