10.33 lakhs profit for Koluru Agricultural Co-operative Society

ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ

ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ

ಮುದ್ದೇಬಿಹಾಳ : ರೈತರ ಸಹಕಾರದಿಂದ ಈ ಸಾಲಿನ ಆರ್ಥಿಕ ವರ್ಷ ಅಂತ್ಯಗೊಂಡ ಅವಧಿಯವರೆಗೆ ಸಂಘವು ಒಟ್ಟು 10.33 ಲಕ್ಷ ಲಾಭ ಗಳಿಸಿದೆ ಎಂದು ತಾಲ್ಲೂಕಿನ ಕೋಳೂರು ಎಲ್.ಟಿ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಸೀತಿಮನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕು ಕೋಳೂರು ತಾಂಡಾದ ದುರ್ಗಾದೇವಿ ಸಂತ ಸೇವಾಲಾಲ್ ಅವರ ದೇವಸ್ಥಾನದಲ್ಲಿ ಶನಿವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಸಹಕಾರಿ ಸಂಘದ ಬೆಳವಣಿಗೆಗೆ ರೈತರು ಕಾರಣರಾಗಿದ್ದು ಸಂಘಕ್ಕೆ ಭಾರವಾಗದಂತೆ ತಮ್ಮಿಂದಲೂ ದೇಣಿಗೆ ನೀಡಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ ಸಂಘದ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲು ಸಚಿವರು, ವಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ್ ಅವರನ್ನು ಕರೆಯಿಸಲಾಗುತ್ತದೆ. ವಿವಿಧ ಮಠಗಳ ಸ್ವಾಮೀಜಿಗಳನ್ನು ಆಹ್ವಾನಿಸಲಾಗುತ್ತದೆ. ಇದಕ್ಕೆ ರೈತರ ಸಹಕಾರ ಅಗತ್ಯವಾಗಿದೆ ಎಂದರು.

ತಾಂಡಾದ ಮುಖಂಡ ರವಿ ನಾಯಕ ಮಾತನಾಡಿ, ನಿಸ್ವಾರ್ಥ ಸೇವೆ ಸಲ್ಲಿಸಿದ್ದರಿಂದಲೇ ಇಂದು ಸಂಘವು ಪ್ರಗತಿಯತ್ತ ಸಾಗಿದೆ. ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಸಂಘದ ಕಟ್ಟಡದ ಉದ್ಘಾಟನಾ ಸಮಾರಂಭ ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ಲೆಕ್ಕಪತ್ರವನ್ನು ಅಶೋಕ ಲಮಾಣಿ ಓದಿದರು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ನಿರ್ದೇಶಕರಾದ ಅಯ್ಯಪ್ಪ ಬಿದರಕುಂದಿ, ಯಲಗೂರದಪ್ಪ ಝಳಕಿ, ಭೀಮಪ್ಪ ವಾಲೀಕಾರ,ಮಲ್ಲಪ್ಪ ತಾರನಾಳ, ಚನ್ನಬಸಪ್ಪ ಕೋಳೂರ, ರೀತಿಬಾಯಿ ಲಮಾಣಿ, ಮಲ್ಲಮ್ಮ ಹಳ್ಳೂರ, ಗುರುಬಾಯಿ ಜಾಧವ,ಚೆನ್ನವ್ವ ಬಯ್ಯಾಪೂರ, ಹೋಬಾ ನಾಯಕ ಧರ್ಮಗಿರಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಂಗಯ್ಯ ಹೊನ್ನಳ್ಳಿ ಇದ್ದರು.

ಇದನ್ನೂ ಓದಿ: ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು