10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ