10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು