10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ