10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ