10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ