10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ