10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.