10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ