103 patients selected for surgery: Eye health screening of 250 patients

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

ಮುದ್ದೇಬಿಹಾಳ : ಪಟ್ಟಣದ ಮನಿಯಾರ ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ಇಲ್ಲಿನ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಶಿಬಿರದ ನೇತೃತ್ವ ವಹಿಸಿದ್ದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಮಾತನಾಡಿ, ಈಗಾಗಲೇ ತಾಳಿಕೋಟಿಯಲ್ಲಿ ಶಿಬಿರ ನಡೆಸಲಾಗಿದ್ದು ಅಲ್ಲಿ 103 ಜನರು ಶಸ್ತçಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ. ಅವರನ್ನು ಕಲಬುರ್ಗಿಯಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಕಳಿಸಿಕೊಡಲಾಗಿದೆ.
ಮುದ್ದೇಬಿಹಾಳದಲ್ಲಿ ನಡೆದ ಶಿಬಿರದಲ್ಲಿ 250 ಜನರ ಕಣ್ಣುಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು 103 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ. ಅವರನ್ನು ಆ.13-15ರಂದು ಶಸ್ತ್ರಚಿಕಿತ್ಸೆಗೆ ವಿಜಯಪುರಕ್ಕೆ ಕಳಿಸಲಾಗುವುದು ಎಂದು ಹೇಳಿದರು.

ಕಣ್ಣಿನ ಪೊರೆ ಬಂದವರಿಗೆ ಮಾತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗುತ್ತದೆ. ಕಣ್ಣಿನ ಗಂಭೀರ ಸಮಸ್ಯೆಗಳಿದ್ದಲ್ಲಿ ರೋಗಿಗಳು ಅವರ ಸಂಬಂಧಿಕರನ್ನು ಕರೆದುಕೊಂಡು ಬಂದು ತಪಾಸಣೆಗೆ ಹೋಗಬೇಕು ಎಂದು ಮನಿಯಾರ ತಿಳಿಸಿದರು.

ಡಾ.ಸತೀಶ ಪಟ್ಟಣಶೆಟ್ಟಿ ಮಾತನಾಡಿ, ಕಳೆದ 12 ವರ್ಷಗಳಿಂದ ಮನಿಯಾರ ಅವರ ನೇತೃತ್ವದಲ್ಲಿ ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆದಿದೆ. ಶ್ರಾವಣ ಮಾಸದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅವರ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಾಗಲಕೋಟೆಯಿಂದ ಆಗಮಿಸಿದ್ದ ಮೇರಿ ಎಂಬುವರು ಮಾತನಾಡಿ, ನನ್ನ ಸ್ನೇಹಿತೆಯಿಂದ ಇಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣೆ ನಡೆಸುತ್ತಾರೆ ಎಂದು ತಿಳಿದು ಬಂದಿದ್ದೇನೆ.ಮನಿಯಾರ ಟ್ರಸ್ಟ್ ನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಮುಖಂಡರಾದ ದಾದಾ ಎತ್ತಿನಮನಿ, ಟ್ರಸ್ಟ್ ಸಂಚಾಲಕ ಅಫ್ತಾಬ ಮನಿಯಾರ, ಬಾಬಾ ಯಕೀನ,ರಜಾಕ ಹುನಕುಂಟಿ ಮೊದಲಾದವರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ