13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)



ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ.ನನ್ನ ಮೇಲೆ ಎಲ್ಲೂ ಕಪ್ಪುಚುಕ್ಕೆ ಇಲ್ಲ. ತಾಳಿಕೋಟಿ ಭಾಗದಲ್ಲಿ 13 ಅಂಗನವಾಡಿಗಳನ್ನು ಅವರು (ನೀಲಮ್ಮ ಬೋರಾವತ್) ನೋಡಿಕೊಳ್ಳುತ್ತಿದ್ದರು. ಆ ಕೇಂದ್ರಗಳಿಗೆ ಸಂಬಂಧಿಸಿದ 13 ಮೊಬೈಲ್ ಅವರ ಬಳಿಯೇ ಇರುತ್ತಿದ್ದವು. ಆ 13 ಅಂಗನವಾಡಿಯ ಆಹಾರವನ್ನು ಅವರೇ ಇಳಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ತನಿಖೆ ನಡೆಸಲು ಮುಂದಾಗಿರುವುದು ಹಾಗೂ ಮುದ್ದೇಬಿಹಾಳದ ಅಂಗನವಾಡಿ ಕಾರ್ಯಕರ್ತೆಯ ವರ್ಗಾವಣೆ ವಿಷಯದಲ್ಲಿ ಮೂರು ಲಕ್ಷ ರೂ.ಬೇಡಿಕೆ ಇಟ್ಟಿದ್ದು ಅದರಲ್ಲಿ 1.12 ಲಕ್ಷ ರೂ. ಅಡ್ವಾನ್ಸ್ ಪಡೆದುಕೊಂಡಿದ್ದಾಗಿ ನಮಗೆ ಲಿಖಿತ ಪತ್ರವನ್ನು ಕಾರ್ಯಕರ್ತೆ ರೇಣುಕಾ ಲಮಾಣಿ ಕೊಟ್ಟಿದ್ದಾರೆ ಇದರ ಬಗ್ಗೆ ತನಿಖೆಗೆ ಮುಂದಾದಾಗ ಅವರು ಕಾರ್ಯಕರ್ತೆಯರನ್ನು ಎತ್ತಿ ಕಟ್ಟಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಇಲಾಖೆಯ ನಿಯಮಗಳಂತೆ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ.ನನಗೆ ಹಣದ ಆಮಿಷವನ್ನೂ ಒಡ್ಡಿದ್ದರು.ಅದಕ್ಕೆ ಬಗ್ಗದಿದ್ದಾಗ ಈ ರೀತಿ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ನನಗೆ 22 ವರ್ಷದ ಮಗಳಿದ್ದಾಳೆ. ಅಂತಹ ಸ್ವಭಾವ ನನ್ನದಲ್ಲ. ನಾನು ದೇಶದ ಗಡಿಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಬಂದಿದ್ದೇನೆ. ಅಂಗನವಾಡಿ ಸಂಘಟನೆಯವರು ಕೊಟ್ಟಿರುವ ಮನವಿಯ ಅಂಶಗಳಲ್ಲಿ ಸತ್ಯವಾಗಿದ್ದರೆ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕುಂಬಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ