13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)



ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ.ನನ್ನ ಮೇಲೆ ಎಲ್ಲೂ ಕಪ್ಪುಚುಕ್ಕೆ ಇಲ್ಲ. ತಾಳಿಕೋಟಿ ಭಾಗದಲ್ಲಿ 13 ಅಂಗನವಾಡಿಗಳನ್ನು ಅವರು (ನೀಲಮ್ಮ ಬೋರಾವತ್) ನೋಡಿಕೊಳ್ಳುತ್ತಿದ್ದರು. ಆ ಕೇಂದ್ರಗಳಿಗೆ ಸಂಬಂಧಿಸಿದ 13 ಮೊಬೈಲ್ ಅವರ ಬಳಿಯೇ ಇರುತ್ತಿದ್ದವು. ಆ 13 ಅಂಗನವಾಡಿಯ ಆಹಾರವನ್ನು ಅವರೇ ಇಳಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ತನಿಖೆ ನಡೆಸಲು ಮುಂದಾಗಿರುವುದು ಹಾಗೂ ಮುದ್ದೇಬಿಹಾಳದ ಅಂಗನವಾಡಿ ಕಾರ್ಯಕರ್ತೆಯ ವರ್ಗಾವಣೆ ವಿಷಯದಲ್ಲಿ ಮೂರು ಲಕ್ಷ ರೂ.ಬೇಡಿಕೆ ಇಟ್ಟಿದ್ದು ಅದರಲ್ಲಿ 1.12 ಲಕ್ಷ ರೂ. ಅಡ್ವಾನ್ಸ್ ಪಡೆದುಕೊಂಡಿದ್ದಾಗಿ ನಮಗೆ ಲಿಖಿತ ಪತ್ರವನ್ನು ಕಾರ್ಯಕರ್ತೆ ರೇಣುಕಾ ಲಮಾಣಿ ಕೊಟ್ಟಿದ್ದಾರೆ ಇದರ ಬಗ್ಗೆ ತನಿಖೆಗೆ ಮುಂದಾದಾಗ ಅವರು ಕಾರ್ಯಕರ್ತೆಯರನ್ನು ಎತ್ತಿ ಕಟ್ಟಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಇಲಾಖೆಯ ನಿಯಮಗಳಂತೆ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ.ನನಗೆ ಹಣದ ಆಮಿಷವನ್ನೂ ಒಡ್ಡಿದ್ದರು.ಅದಕ್ಕೆ ಬಗ್ಗದಿದ್ದಾಗ ಈ ರೀತಿ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ನನಗೆ 22 ವರ್ಷದ ಮಗಳಿದ್ದಾಳೆ. ಅಂತಹ ಸ್ವಭಾವ ನನ್ನದಲ್ಲ. ನಾನು ದೇಶದ ಗಡಿಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಬಂದಿದ್ದೇನೆ. ಅಂಗನವಾಡಿ ಸಂಘಟನೆಯವರು ಕೊಟ್ಟಿರುವ ಮನವಿಯ ಅಂಶಗಳಲ್ಲಿ ಸತ್ಯವಾಗಿದ್ದರೆ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕುಂಬಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ