13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)



ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ.ನನ್ನ ಮೇಲೆ ಎಲ್ಲೂ ಕಪ್ಪುಚುಕ್ಕೆ ಇಲ್ಲ. ತಾಳಿಕೋಟಿ ಭಾಗದಲ್ಲಿ 13 ಅಂಗನವಾಡಿಗಳನ್ನು ಅವರು (ನೀಲಮ್ಮ ಬೋರಾವತ್) ನೋಡಿಕೊಳ್ಳುತ್ತಿದ್ದರು. ಆ ಕೇಂದ್ರಗಳಿಗೆ ಸಂಬಂಧಿಸಿದ 13 ಮೊಬೈಲ್ ಅವರ ಬಳಿಯೇ ಇರುತ್ತಿದ್ದವು. ಆ 13 ಅಂಗನವಾಡಿಯ ಆಹಾರವನ್ನು ಅವರೇ ಇಳಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ತನಿಖೆ ನಡೆಸಲು ಮುಂದಾಗಿರುವುದು ಹಾಗೂ ಮುದ್ದೇಬಿಹಾಳದ ಅಂಗನವಾಡಿ ಕಾರ್ಯಕರ್ತೆಯ ವರ್ಗಾವಣೆ ವಿಷಯದಲ್ಲಿ ಮೂರು ಲಕ್ಷ ರೂ.ಬೇಡಿಕೆ ಇಟ್ಟಿದ್ದು ಅದರಲ್ಲಿ 1.12 ಲಕ್ಷ ರೂ. ಅಡ್ವಾನ್ಸ್ ಪಡೆದುಕೊಂಡಿದ್ದಾಗಿ ನಮಗೆ ಲಿಖಿತ ಪತ್ರವನ್ನು ಕಾರ್ಯಕರ್ತೆ ರೇಣುಕಾ ಲಮಾಣಿ ಕೊಟ್ಟಿದ್ದಾರೆ ಇದರ ಬಗ್ಗೆ ತನಿಖೆಗೆ ಮುಂದಾದಾಗ ಅವರು ಕಾರ್ಯಕರ್ತೆಯರನ್ನು ಎತ್ತಿ ಕಟ್ಟಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಇಲಾಖೆಯ ನಿಯಮಗಳಂತೆ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ.ನನಗೆ ಹಣದ ಆಮಿಷವನ್ನೂ ಒಡ್ಡಿದ್ದರು.ಅದಕ್ಕೆ ಬಗ್ಗದಿದ್ದಾಗ ಈ ರೀತಿ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ನನಗೆ 22 ವರ್ಷದ ಮಗಳಿದ್ದಾಳೆ. ಅಂತಹ ಸ್ವಭಾವ ನನ್ನದಲ್ಲ. ನಾನು ದೇಶದ ಗಡಿಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಬಂದಿದ್ದೇನೆ. ಅಂಗನವಾಡಿ ಸಂಘಟನೆಯವರು ಕೊಟ್ಟಿರುವ ಮನವಿಯ ಅಂಶಗಳಲ್ಲಿ ಸತ್ಯವಾಗಿದ್ದರೆ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕುಂಬಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ