13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)



ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ.ನನ್ನ ಮೇಲೆ ಎಲ್ಲೂ ಕಪ್ಪುಚುಕ್ಕೆ ಇಲ್ಲ. ತಾಳಿಕೋಟಿ ಭಾಗದಲ್ಲಿ 13 ಅಂಗನವಾಡಿಗಳನ್ನು ಅವರು (ನೀಲಮ್ಮ ಬೋರಾವತ್) ನೋಡಿಕೊಳ್ಳುತ್ತಿದ್ದರು. ಆ ಕೇಂದ್ರಗಳಿಗೆ ಸಂಬಂಧಿಸಿದ 13 ಮೊಬೈಲ್ ಅವರ ಬಳಿಯೇ ಇರುತ್ತಿದ್ದವು. ಆ 13 ಅಂಗನವಾಡಿಯ ಆಹಾರವನ್ನು ಅವರೇ ಇಳಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ತನಿಖೆ ನಡೆಸಲು ಮುಂದಾಗಿರುವುದು ಹಾಗೂ ಮುದ್ದೇಬಿಹಾಳದ ಅಂಗನವಾಡಿ ಕಾರ್ಯಕರ್ತೆಯ ವರ್ಗಾವಣೆ ವಿಷಯದಲ್ಲಿ ಮೂರು ಲಕ್ಷ ರೂ.ಬೇಡಿಕೆ ಇಟ್ಟಿದ್ದು ಅದರಲ್ಲಿ 1.12 ಲಕ್ಷ ರೂ. ಅಡ್ವಾನ್ಸ್ ಪಡೆದುಕೊಂಡಿದ್ದಾಗಿ ನಮಗೆ ಲಿಖಿತ ಪತ್ರವನ್ನು ಕಾರ್ಯಕರ್ತೆ ರೇಣುಕಾ ಲಮಾಣಿ ಕೊಟ್ಟಿದ್ದಾರೆ ಇದರ ಬಗ್ಗೆ ತನಿಖೆಗೆ ಮುಂದಾದಾಗ ಅವರು ಕಾರ್ಯಕರ್ತೆಯರನ್ನು ಎತ್ತಿ ಕಟ್ಟಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಇಲಾಖೆಯ ನಿಯಮಗಳಂತೆ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ.ನನಗೆ ಹಣದ ಆಮಿಷವನ್ನೂ ಒಡ್ಡಿದ್ದರು.ಅದಕ್ಕೆ ಬಗ್ಗದಿದ್ದಾಗ ಈ ರೀತಿ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ನನಗೆ 22 ವರ್ಷದ ಮಗಳಿದ್ದಾಳೆ. ಅಂತಹ ಸ್ವಭಾವ ನನ್ನದಲ್ಲ. ನಾನು ದೇಶದ ಗಡಿಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಬಂದಿದ್ದೇನೆ. ಅಂಗನವಾಡಿ ಸಂಘಟನೆಯವರು ಕೊಟ್ಟಿರುವ ಮನವಿಯ ಅಂಶಗಳಲ್ಲಿ ಸತ್ಯವಾಗಿದ್ದರೆ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕುಂಬಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ