ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಯಾಕೆ ಎತ್ತಂಗಡಿ : ವಿಜಯಪುರ ಡಿಡಿಪಿಐ ಕಚೇರಿಗೆ ಧಾರವಾಡದ ಆಯುಕ್ತರು ಭೇಟಿ ನೀಡಿದ್ದ ವೇಳೆ ಪತ್ರಾಂಕಿತ ಸಹಾಯಕರು ಮತ್ತು ಅಧೀಕ್ಷಕರು ತಮ್ಮ ಅಧೀನ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮೇಜು ತಪಾಸಣೆ ಮಾಡಿರುವುದಿಲ್ಲ.ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ತಿಳಿವಳಿಕೆ ನೀಡಿಲ್ಲ.ಇದರಿಂದ ಕಚೇರಿ ಆಡಳಿತ ನಿರ್ವಹಣೆಯಲ್ಲಿ ಪತ್ರಾಂಕಿತ ಸಹಾಯಕರು ಮತ್ತು ಅಧಿಕ್ಷಕರು ವಿಫಲರಾಗಿದ್ದು ಕಂಡು ಬರುತ್ತಿದ್ದು ಇವರ ಕರ್ತವ್ಯ ನಿರ್ಲಕ್ಷತೆ ಎದ್ದು ಕಾಣುತ್ತಿದೆ.ಕಚೇರಿ ಸಿಬ್ಬಂದಿ ಶಿಕ್ಷಕರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ವಿನಾಕಾರಣ ವಿಳಂಬ ಮಾಡುತ್ತಿರುವ ಹಾಗೂ ಕಡತಗಳನ್ನು ನಿಯಮಾನುಸಾರ ಇತ್ಯರ್ಥಪಡಿಸದೇ ಇರುವ ಅಂಶಗಳು ಕಂಡು ಬಂದಿದ್ದು ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುವುದಲ್ಲದೇ ಇಲಾಖೆಯ ಮೇಲಧಿಕಾರಿಗಳು ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳುತ್ತಿರುವ ಸಿಬ್ಬಂದಿಯನ್ನು ಕಚೇರಿ ಸುಗಮ ಆಡಳಿತದ ಹಿತದೃಷ್ಟಿಯಿಂದ ಬೋಧಕೇತರ ವೃಂದದ ನೌಕರರನ್ನು ಬೇರೆ ಸ್ಥಳಗಳಿಗೆ ನಿಯೋಜಿಸುವಂತೆ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ವರ್ಗಾವಣೆಯಾದ ನೌಕರರು ಇವರು : ವಿಜಯಪುರ ಡಿಡಿಪಿಐ ಕಚೇರಿಯ ಸಿಬ್ಬಂದಿಯಾದ ಲೆಕ್ಕಾಧೀಕ್ಷಕ ದಶರಥ ಸಲಗರಕರ ಸಿಟಿಇ ಜಮಖಂಡಿಗೆ,ಅಧೀಕ್ಷಕರಾದ ಆರ್.ಬಿ.ಅಗರಖೇಡ ಹಾಗೂ ಪಿ.ಎಸ್.ಕಂಠಿ ಅವರನ್ನು ವಿಜಯಪುರ ಡಯಟ್‌ಗೆ, ಅಧೀಕ್ಷಕ ಅಶೋಕ ಹೂಗಾರ ಅವರನ್ನು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ,ಪ್ರಥಮ ದರ್ಜೆ ಸಹಾಯಕಿ ಎ.ಎ.ಬಗಲಿ ಅವರನ್ನು ಮುದ್ದೇಬಿಹಾಳ ತಾಲ್ಲೂಕು ರಕ್ಕಸಗಿ ಕೆಪಿಎಸ್ ಶಾಲೆಗೆ,ಎಫ್.ಡಿ.ಎ ಗೀತಾ ಹಾದಿಮನಿ ಅವರನ್ನು ಬಸವನ ಬಾಗೇವಾಡಿ ಬಿಇಒ ಕಚೇರಿಗೆ,ಎಫ್.ಡಿ.ಎ ದೀಪಾ ಹಿರೇಮಠ ಹಾಗೂ ಎನ್.ಎಂ.ಚಟ್ಟರಕಿ ಅವರನ್ನು ವಿಜಯಪುರ ಗ್ರಾಮೀಣ ವಲಯದ ಬಿಇಒ ಕಚೇರಿಗೆ, ಎಫ್.ಡಿ.ಎ ಬಸವರಾಜ ಹೊಲ್ದೂರ ಅವರನ್ನು ಮುದ್ದೇಬಿಹಾಳ ತಾಲ್ಲೂಕು ಇಂಗಳಗಿ ಸರಕಾರಿ ಪ್ರೌಢಶಾಲೆಗೆ,ಎಫ್.ಡಿ.ಎ ಪಿ.ಪಿ.ದಶವಂತ ಅವರನ್ನು ವಿಜಯಪುರ ಜಿಲ್ಲೆ ಅರ್ಜುಣಗಿ ಕೆಪಿಎಸ್ ಶಾಲೆಗೆ,ಎಸ್.ಡಿ.ಎ ರಾಜೇಂದ್ರ ನಿವರಗಿ ಅವರನ್ನು ವಿಜಯಪುರ ಜಿಲ್ಲೆ ಜುಮನಾಳ ಸರ್ಕಾರಿ ಪ್ರೌಢಶಾಲೆಗೆ,ಎಸ್.ಡಿ.ಎ ಎ.ಆರ್.ಪಾಟೀಲ ಅವರನ್ನು ಚಡಚಣ ಬಿಇಒ ಕಚೇರಿಗೆ,ಸಿಸಿಟಿ ಎನ್.ಎ.ಬೀಳಗಿ ಅವರನ್ನು ಮುದ್ದೇಬಿಹಾಳ ಬಿಇಒ ಕಚೇರಿಗೆ ಹಾಗೂ ಎಫ್.ಡಿ.ಎ ಎಸ್.ಎ.ಕಲ್ಮನಿ ಅವರನ್ನು ವಿಜಯಪುರ ಜಿಲ್ಲೆ ಅರಕೇರಿ ಸರ್ಕಾರಿ ಪ್ರೌಢಶಾಲೆಗೆ ನಿಯೋಜನೆ ಮಾಡಿ ಜ.19ರಂದು ವಿಜಯಪುರದ ಡಿಡಿಪಿಐ ವೀರಯ್ಯ ಸಾಲಿಮಠ ಆದೇಶಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಡಿಡಿಪಿಐ ಕಚೇರಿಯಲ್ಲಿ ಕೆಲಸಗಳು ವಿಳಂಬಗತಿಯಲ್ಲಿ ಆಗುತ್ತಿರುವ ಹಾಗೂ ಕೆಲವು ಕಡತಗಳು ನಾಪತ್ತೆಯಾದ ಪ್ರಕರಣಗಳಿಗೆ ಸಂಬoಧಿಸಿದoತೆ ಇಲಾಖೆಯ ಮೇಲಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸದೇ ಕೇವಲ ಅನ್ಯ ಸ್ಥಳಗಳಿಗೆ ನಿಯೋಜಿಸಿದ್ದೇಕೆ ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ