ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಯಾಕೆ ಎತ್ತಂಗಡಿ : ವಿಜಯಪುರ ಡಿಡಿಪಿಐ ಕಚೇರಿಗೆ ಧಾರವಾಡದ ಆಯುಕ್ತರು ಭೇಟಿ ನೀಡಿದ್ದ ವೇಳೆ ಪತ್ರಾಂಕಿತ ಸಹಾಯಕರು ಮತ್ತು ಅಧೀಕ್ಷಕರು ತಮ್ಮ ಅಧೀನ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮೇಜು ತಪಾಸಣೆ ಮಾಡಿರುವುದಿಲ್ಲ.ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ತಿಳಿವಳಿಕೆ ನೀಡಿಲ್ಲ.ಇದರಿಂದ ಕಚೇರಿ ಆಡಳಿತ ನಿರ್ವಹಣೆಯಲ್ಲಿ ಪತ್ರಾಂಕಿತ ಸಹಾಯಕರು ಮತ್ತು ಅಧಿಕ್ಷಕರು ವಿಫಲರಾಗಿದ್ದು ಕಂಡು ಬರುತ್ತಿದ್ದು ಇವರ ಕರ್ತವ್ಯ ನಿರ್ಲಕ್ಷತೆ ಎದ್ದು ಕಾಣುತ್ತಿದೆ.ಕಚೇರಿ ಸಿಬ್ಬಂದಿ ಶಿಕ್ಷಕರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ವಿನಾಕಾರಣ ವಿಳಂಬ ಮಾಡುತ್ತಿರುವ ಹಾಗೂ ಕಡತಗಳನ್ನು ನಿಯಮಾನುಸಾರ ಇತ್ಯರ್ಥಪಡಿಸದೇ ಇರುವ ಅಂಶಗಳು ಕಂಡು ಬಂದಿದ್ದು ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುವುದಲ್ಲದೇ ಇಲಾಖೆಯ ಮೇಲಧಿಕಾರಿಗಳು ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳುತ್ತಿರುವ ಸಿಬ್ಬಂದಿಯನ್ನು ಕಚೇರಿ ಸುಗಮ ಆಡಳಿತದ ಹಿತದೃಷ್ಟಿಯಿಂದ ಬೋಧಕೇತರ ವೃಂದದ ನೌಕರರನ್ನು ಬೇರೆ ಸ್ಥಳಗಳಿಗೆ ನಿಯೋಜಿಸುವಂತೆ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ವರ್ಗಾವಣೆಯಾದ ನೌಕರರು ಇವರು : ವಿಜಯಪುರ ಡಿಡಿಪಿಐ ಕಚೇರಿಯ ಸಿಬ್ಬಂದಿಯಾದ ಲೆಕ್ಕಾಧೀಕ್ಷಕ ದಶರಥ ಸಲಗರಕರ ಸಿಟಿಇ ಜಮಖಂಡಿಗೆ,ಅಧೀಕ್ಷಕರಾದ ಆರ್.ಬಿ.ಅಗರಖೇಡ ಹಾಗೂ ಪಿ.ಎಸ್.ಕಂಠಿ ಅವರನ್ನು ವಿಜಯಪುರ ಡಯಟ್‌ಗೆ, ಅಧೀಕ್ಷಕ ಅಶೋಕ ಹೂಗಾರ ಅವರನ್ನು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ,ಪ್ರಥಮ ದರ್ಜೆ ಸಹಾಯಕಿ ಎ.ಎ.ಬಗಲಿ ಅವರನ್ನು ಮುದ್ದೇಬಿಹಾಳ ತಾಲ್ಲೂಕು ರಕ್ಕಸಗಿ ಕೆಪಿಎಸ್ ಶಾಲೆಗೆ,ಎಫ್.ಡಿ.ಎ ಗೀತಾ ಹಾದಿಮನಿ ಅವರನ್ನು ಬಸವನ ಬಾಗೇವಾಡಿ ಬಿಇಒ ಕಚೇರಿಗೆ,ಎಫ್.ಡಿ.ಎ ದೀಪಾ ಹಿರೇಮಠ ಹಾಗೂ ಎನ್.ಎಂ.ಚಟ್ಟರಕಿ ಅವರನ್ನು ವಿಜಯಪುರ ಗ್ರಾಮೀಣ ವಲಯದ ಬಿಇಒ ಕಚೇರಿಗೆ, ಎಫ್.ಡಿ.ಎ ಬಸವರಾಜ ಹೊಲ್ದೂರ ಅವರನ್ನು ಮುದ್ದೇಬಿಹಾಳ ತಾಲ್ಲೂಕು ಇಂಗಳಗಿ ಸರಕಾರಿ ಪ್ರೌಢಶಾಲೆಗೆ,ಎಫ್.ಡಿ.ಎ ಪಿ.ಪಿ.ದಶವಂತ ಅವರನ್ನು ವಿಜಯಪುರ ಜಿಲ್ಲೆ ಅರ್ಜುಣಗಿ ಕೆಪಿಎಸ್ ಶಾಲೆಗೆ,ಎಸ್.ಡಿ.ಎ ರಾಜೇಂದ್ರ ನಿವರಗಿ ಅವರನ್ನು ವಿಜಯಪುರ ಜಿಲ್ಲೆ ಜುಮನಾಳ ಸರ್ಕಾರಿ ಪ್ರೌಢಶಾಲೆಗೆ,ಎಸ್.ಡಿ.ಎ ಎ.ಆರ್.ಪಾಟೀಲ ಅವರನ್ನು ಚಡಚಣ ಬಿಇಒ ಕಚೇರಿಗೆ,ಸಿಸಿಟಿ ಎನ್.ಎ.ಬೀಳಗಿ ಅವರನ್ನು ಮುದ್ದೇಬಿಹಾಳ ಬಿಇಒ ಕಚೇರಿಗೆ ಹಾಗೂ ಎಫ್.ಡಿ.ಎ ಎಸ್.ಎ.ಕಲ್ಮನಿ ಅವರನ್ನು ವಿಜಯಪುರ ಜಿಲ್ಲೆ ಅರಕೇರಿ ಸರ್ಕಾರಿ ಪ್ರೌಢಶಾಲೆಗೆ ನಿಯೋಜನೆ ಮಾಡಿ ಜ.19ರಂದು ವಿಜಯಪುರದ ಡಿಡಿಪಿಐ ವೀರಯ್ಯ ಸಾಲಿಮಠ ಆದೇಶಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಡಿಡಿಪಿಐ ಕಚೇರಿಯಲ್ಲಿ ಕೆಲಸಗಳು ವಿಳಂಬಗತಿಯಲ್ಲಿ ಆಗುತ್ತಿರುವ ಹಾಗೂ ಕೆಲವು ಕಡತಗಳು ನಾಪತ್ತೆಯಾದ ಪ್ರಕರಣಗಳಿಗೆ ಸಂಬoಧಿಸಿದoತೆ ಇಲಾಖೆಯ ಮೇಲಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸದೇ ಕೇವಲ ಅನ್ಯ ಸ್ಥಳಗಳಿಗೆ ನಿಯೋಜಿಸಿದ್ದೇಕೆ ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,