ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಯಾಕೆ ಎತ್ತಂಗಡಿ : ವಿಜಯಪುರ ಡಿಡಿಪಿಐ ಕಚೇರಿಗೆ ಧಾರವಾಡದ ಆಯುಕ್ತರು ಭೇಟಿ ನೀಡಿದ್ದ ವೇಳೆ ಪತ್ರಾಂಕಿತ ಸಹಾಯಕರು ಮತ್ತು ಅಧೀಕ್ಷಕರು ತಮ್ಮ ಅಧೀನ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮೇಜು ತಪಾಸಣೆ ಮಾಡಿರುವುದಿಲ್ಲ.ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ತಿಳಿವಳಿಕೆ ನೀಡಿಲ್ಲ.ಇದರಿಂದ ಕಚೇರಿ ಆಡಳಿತ ನಿರ್ವಹಣೆಯಲ್ಲಿ ಪತ್ರಾಂಕಿತ ಸಹಾಯಕರು ಮತ್ತು ಅಧಿಕ್ಷಕರು ವಿಫಲರಾಗಿದ್ದು ಕಂಡು ಬರುತ್ತಿದ್ದು ಇವರ ಕರ್ತವ್ಯ ನಿರ್ಲಕ್ಷತೆ ಎದ್ದು ಕಾಣುತ್ತಿದೆ.ಕಚೇರಿ ಸಿಬ್ಬಂದಿ ಶಿಕ್ಷಕರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ವಿನಾಕಾರಣ ವಿಳಂಬ ಮಾಡುತ್ತಿರುವ ಹಾಗೂ ಕಡತಗಳನ್ನು ನಿಯಮಾನುಸಾರ ಇತ್ಯರ್ಥಪಡಿಸದೇ ಇರುವ ಅಂಶಗಳು ಕಂಡು ಬಂದಿದ್ದು ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುವುದಲ್ಲದೇ ಇಲಾಖೆಯ ಮೇಲಧಿಕಾರಿಗಳು ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳುತ್ತಿರುವ ಸಿಬ್ಬಂದಿಯನ್ನು ಕಚೇರಿ ಸುಗಮ ಆಡಳಿತದ ಹಿತದೃಷ್ಟಿಯಿಂದ ಬೋಧಕೇತರ ವೃಂದದ ನೌಕರರನ್ನು ಬೇರೆ ಸ್ಥಳಗಳಿಗೆ ನಿಯೋಜಿಸುವಂತೆ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ವರ್ಗಾವಣೆಯಾದ ನೌಕರರು ಇವರು : ವಿಜಯಪುರ ಡಿಡಿಪಿಐ ಕಚೇರಿಯ ಸಿಬ್ಬಂದಿಯಾದ ಲೆಕ್ಕಾಧೀಕ್ಷಕ ದಶರಥ ಸಲಗರಕರ ಸಿಟಿಇ ಜಮಖಂಡಿಗೆ,ಅಧೀಕ್ಷಕರಾದ ಆರ್.ಬಿ.ಅಗರಖೇಡ ಹಾಗೂ ಪಿ.ಎಸ್.ಕಂಠಿ ಅವರನ್ನು ವಿಜಯಪುರ ಡಯಟ್‌ಗೆ, ಅಧೀಕ್ಷಕ ಅಶೋಕ ಹೂಗಾರ ಅವರನ್ನು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ,ಪ್ರಥಮ ದರ್ಜೆ ಸಹಾಯಕಿ ಎ.ಎ.ಬಗಲಿ ಅವರನ್ನು ಮುದ್ದೇಬಿಹಾಳ ತಾಲ್ಲೂಕು ರಕ್ಕಸಗಿ ಕೆಪಿಎಸ್ ಶಾಲೆಗೆ,ಎಫ್.ಡಿ.ಎ ಗೀತಾ ಹಾದಿಮನಿ ಅವರನ್ನು ಬಸವನ ಬಾಗೇವಾಡಿ ಬಿಇಒ ಕಚೇರಿಗೆ,ಎಫ್.ಡಿ.ಎ ದೀಪಾ ಹಿರೇಮಠ ಹಾಗೂ ಎನ್.ಎಂ.ಚಟ್ಟರಕಿ ಅವರನ್ನು ವಿಜಯಪುರ ಗ್ರಾಮೀಣ ವಲಯದ ಬಿಇಒ ಕಚೇರಿಗೆ, ಎಫ್.ಡಿ.ಎ ಬಸವರಾಜ ಹೊಲ್ದೂರ ಅವರನ್ನು ಮುದ್ದೇಬಿಹಾಳ ತಾಲ್ಲೂಕು ಇಂಗಳಗಿ ಸರಕಾರಿ ಪ್ರೌಢಶಾಲೆಗೆ,ಎಫ್.ಡಿ.ಎ ಪಿ.ಪಿ.ದಶವಂತ ಅವರನ್ನು ವಿಜಯಪುರ ಜಿಲ್ಲೆ ಅರ್ಜುಣಗಿ ಕೆಪಿಎಸ್ ಶಾಲೆಗೆ,ಎಸ್.ಡಿ.ಎ ರಾಜೇಂದ್ರ ನಿವರಗಿ ಅವರನ್ನು ವಿಜಯಪುರ ಜಿಲ್ಲೆ ಜುಮನಾಳ ಸರ್ಕಾರಿ ಪ್ರೌಢಶಾಲೆಗೆ,ಎಸ್.ಡಿ.ಎ ಎ.ಆರ್.ಪಾಟೀಲ ಅವರನ್ನು ಚಡಚಣ ಬಿಇಒ ಕಚೇರಿಗೆ,ಸಿಸಿಟಿ ಎನ್.ಎ.ಬೀಳಗಿ ಅವರನ್ನು ಮುದ್ದೇಬಿಹಾಳ ಬಿಇಒ ಕಚೇರಿಗೆ ಹಾಗೂ ಎಫ್.ಡಿ.ಎ ಎಸ್.ಎ.ಕಲ್ಮನಿ ಅವರನ್ನು ವಿಜಯಪುರ ಜಿಲ್ಲೆ ಅರಕೇರಿ ಸರ್ಕಾರಿ ಪ್ರೌಢಶಾಲೆಗೆ ನಿಯೋಜನೆ ಮಾಡಿ ಜ.19ರಂದು ವಿಜಯಪುರದ ಡಿಡಿಪಿಐ ವೀರಯ್ಯ ಸಾಲಿಮಠ ಆದೇಶಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಡಿಡಿಪಿಐ ಕಚೇರಿಯಲ್ಲಿ ಕೆಲಸಗಳು ವಿಳಂಬಗತಿಯಲ್ಲಿ ಆಗುತ್ತಿರುವ ಹಾಗೂ ಕೆಲವು ಕಡತಗಳು ನಾಪತ್ತೆಯಾದ ಪ್ರಕರಣಗಳಿಗೆ ಸಂಬoಧಿಸಿದoತೆ ಇಲಾಖೆಯ ಮೇಲಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸದೇ ಕೇವಲ ಅನ್ಯ ಸ್ಥಳಗಳಿಗೆ ನಿಯೋಜಿಸಿದ್ದೇಕೆ ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ