21 couples who entered a new life in a mass wedding celebration

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಇಳಕಲ್: ನಗರದ ಆರಾಧ್ಯ ದೈವ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 21 ನವ ವಧುವರರು ಹೊಸ ಜೀವನಕ್ಕೆ ಕಾಲಿಟ್ಟರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಬಸವ ತತ್ವದ ಅನುಸಾರವಾಗಿ ಪೂಜ್ಯ ಗುರುಮಂತ ಶ್ರೀಗಳ ಹಾಗೂ ರಾಜ್ಯದ ವಿವಿಧ ಮಠಗಳ ಮಠಾಧೀಶರ ಸಾನಿಧ್ಯದಲ್ಲಿ ಇಳಕಲ್ ನಗರದ ಎಪಿಎಂಸಿ ವರ್ತಕರ ಸಂಘ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವೇದಿಕೆ ಮೇಲಿದ್ದ ಪೂಜ್ಯರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ಬಡವರಿಗೆ ಅನುಕೂಲವಾಗಲೆಂದು ಸಾಮೂಹಿಕ ವಿವಾಹ ಮಹೋತ್ಸವ ಕಳೆದ 40 ವರ್ಷಗಳಿಂದ ಆಯೋಜಿಸಿತ ಬಂದಿರುವ ಎಪಿಎಂಸಿ ವರ್ತಕರಿಗೆ ಹಾಗೂ ಸಂಘದವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಹತ್ತಾರು ಜನ ಪೂಜ್ಯರು ಹಾಗೂ ಗಣ್ಯರ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ಎಂದು ನವ ಜೋಡಿಗಳಿಗೆ ಶುಭ ಹಾರೈಸಿದರು.

ಅಲ್ಲದೆ, ಶರಣ ಸಂಸ್ಕೃತಿ ಮಹೋತ್ಸವದ ಈ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ನೀವುಗಳು ಸುಖ ಸಂಸಾರ ಸಾಗಿಸಿದರೆ ವಿವಾಹ ಮಹೋತ್ಸವ ಆಯೋಜಿಸಿದವರಿಗೂ ಹಾಗೂ ಪೂಜ್ಯ ವಿಜಯ ಮಹಾಂತ ಅಪ್ಪಗಳವರಿಗೂ ಕೃತಜ್ಞತೆ ಸಲ್ಲಿಸಿದಂತಾಗುತ್ತದೆ. ಸದ್ಯ ನಮ್ಮ ದೇಶದ ಜನಸಂಖ್ಯೆ 139 ಕೋಟಿ ದಾಟಿದೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿಯಮದಂತೆ ಆರತಿಗೆ ಒಬ್ಬಳು ಕೀರ್ತಿಗೆ ಒಬ್ಬ ಎಂಬಂತೆ ಎರಡು ಮಕ್ಕಳನ್ನು ಹಂದಿ ಸುಖ ಜೀವನ ಸಾಗಿಸಿ ಎಂದು ಕಿವಿಮಾತು ಹೇಳಿದರು.

ಸಾನಿಧ್ಯ ವಹಿಸಿದ್ದ ಗುರು ಮಹಾಂತ ಶ್ರೀಗಳು ಮಾತನಾಡಿ, ನವ ಜೀವನಕ್ಕೆ ಕಾಲಿಡುತ್ತಿರುವ ವರರು ತಮ್ಮಲ್ಲಿರುವ ದುಶ್ಚಟಗಳನ್ನು ಇಂದಿನಿಂದಲೇ ಈ ಕ್ಷೇತ್ರದಲ್ಲಿಯೇ ತ್ಯಜಿಸಿ ಪೂಜ್ಯರ ಪಾದಕ್ಕೆ ಅರ್ಪಿಸಬೇಕು. ದುಶ್ಚಟಗಳನ್ನು ತ್ಯಜಿಸಿದಾಗ ಮಾತ್ರ ಸುಖ ಜೀವನ ಸಾಗಿಸಲು ಸಾಧ್ಯ ಎಂದು ಆಶೀರ್ವಚನ ನೀಡಿದರು.

ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಕಾರ್ಯಕ್ರಮದ ವೇದಿಕೆ ಮೇಲೆ ಎಪಿಎಂಸಿ ವರ್ತಕರಾದ ಮಹಾಂತಗೌಡ ಪಾಟೀಲ್ ತೊಂಡಿಹಾಳ, ಅಮರೇಶ್ ಗೌಡರ್, ಸಂಗಣ್ಣ ಕಂಪ್ಲಿ, ಹಿರಿಯರಾದ ಜಿಪಿ ಪಾಟೀಲ್, ಶಿವರುದ್ರಪ್ಪ ಗೊಂಗಡಶೆಟ್ಟಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ