21 couples who entered a new life in a mass wedding celebration

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಇಳಕಲ್: ನಗರದ ಆರಾಧ್ಯ ದೈವ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 21 ನವ ವಧುವರರು ಹೊಸ ಜೀವನಕ್ಕೆ ಕಾಲಿಟ್ಟರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಬಸವ ತತ್ವದ ಅನುಸಾರವಾಗಿ ಪೂಜ್ಯ ಗುರುಮಂತ ಶ್ರೀಗಳ ಹಾಗೂ ರಾಜ್ಯದ ವಿವಿಧ ಮಠಗಳ ಮಠಾಧೀಶರ ಸಾನಿಧ್ಯದಲ್ಲಿ ಇಳಕಲ್ ನಗರದ ಎಪಿಎಂಸಿ ವರ್ತಕರ ಸಂಘ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವೇದಿಕೆ ಮೇಲಿದ್ದ ಪೂಜ್ಯರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ಬಡವರಿಗೆ ಅನುಕೂಲವಾಗಲೆಂದು ಸಾಮೂಹಿಕ ವಿವಾಹ ಮಹೋತ್ಸವ ಕಳೆದ 40 ವರ್ಷಗಳಿಂದ ಆಯೋಜಿಸಿತ ಬಂದಿರುವ ಎಪಿಎಂಸಿ ವರ್ತಕರಿಗೆ ಹಾಗೂ ಸಂಘದವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಹತ್ತಾರು ಜನ ಪೂಜ್ಯರು ಹಾಗೂ ಗಣ್ಯರ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ಎಂದು ನವ ಜೋಡಿಗಳಿಗೆ ಶುಭ ಹಾರೈಸಿದರು.

ಅಲ್ಲದೆ, ಶರಣ ಸಂಸ್ಕೃತಿ ಮಹೋತ್ಸವದ ಈ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ನೀವುಗಳು ಸುಖ ಸಂಸಾರ ಸಾಗಿಸಿದರೆ ವಿವಾಹ ಮಹೋತ್ಸವ ಆಯೋಜಿಸಿದವರಿಗೂ ಹಾಗೂ ಪೂಜ್ಯ ವಿಜಯ ಮಹಾಂತ ಅಪ್ಪಗಳವರಿಗೂ ಕೃತಜ್ಞತೆ ಸಲ್ಲಿಸಿದಂತಾಗುತ್ತದೆ. ಸದ್ಯ ನಮ್ಮ ದೇಶದ ಜನಸಂಖ್ಯೆ 139 ಕೋಟಿ ದಾಟಿದೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿಯಮದಂತೆ ಆರತಿಗೆ ಒಬ್ಬಳು ಕೀರ್ತಿಗೆ ಒಬ್ಬ ಎಂಬಂತೆ ಎರಡು ಮಕ್ಕಳನ್ನು ಹಂದಿ ಸುಖ ಜೀವನ ಸಾಗಿಸಿ ಎಂದು ಕಿವಿಮಾತು ಹೇಳಿದರು.

ಸಾನಿಧ್ಯ ವಹಿಸಿದ್ದ ಗುರು ಮಹಾಂತ ಶ್ರೀಗಳು ಮಾತನಾಡಿ, ನವ ಜೀವನಕ್ಕೆ ಕಾಲಿಡುತ್ತಿರುವ ವರರು ತಮ್ಮಲ್ಲಿರುವ ದುಶ್ಚಟಗಳನ್ನು ಇಂದಿನಿಂದಲೇ ಈ ಕ್ಷೇತ್ರದಲ್ಲಿಯೇ ತ್ಯಜಿಸಿ ಪೂಜ್ಯರ ಪಾದಕ್ಕೆ ಅರ್ಪಿಸಬೇಕು. ದುಶ್ಚಟಗಳನ್ನು ತ್ಯಜಿಸಿದಾಗ ಮಾತ್ರ ಸುಖ ಜೀವನ ಸಾಗಿಸಲು ಸಾಧ್ಯ ಎಂದು ಆಶೀರ್ವಚನ ನೀಡಿದರು.

ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಕಾರ್ಯಕ್ರಮದ ವೇದಿಕೆ ಮೇಲೆ ಎಪಿಎಂಸಿ ವರ್ತಕರಾದ ಮಹಾಂತಗೌಡ ಪಾಟೀಲ್ ತೊಂಡಿಹಾಳ, ಅಮರೇಶ್ ಗೌಡರ್, ಸಂಗಣ್ಣ ಕಂಪ್ಲಿ, ಹಿರಿಯರಾದ ಜಿಪಿ ಪಾಟೀಲ್, ಶಿವರುದ್ರಪ್ಪ ಗೊಂಗಡಶೆಟ್ಟಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ