21 couples who entered a new life in a mass wedding celebration

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಇಳಕಲ್: ನಗರದ ಆರಾಧ್ಯ ದೈವ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 21 ನವ ವಧುವರರು ಹೊಸ ಜೀವನಕ್ಕೆ ಕಾಲಿಟ್ಟರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಬಸವ ತತ್ವದ ಅನುಸಾರವಾಗಿ ಪೂಜ್ಯ ಗುರುಮಂತ ಶ್ರೀಗಳ ಹಾಗೂ ರಾಜ್ಯದ ವಿವಿಧ ಮಠಗಳ ಮಠಾಧೀಶರ ಸಾನಿಧ್ಯದಲ್ಲಿ ಇಳಕಲ್ ನಗರದ ಎಪಿಎಂಸಿ ವರ್ತಕರ ಸಂಘ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವೇದಿಕೆ ಮೇಲಿದ್ದ ಪೂಜ್ಯರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ಬಡವರಿಗೆ ಅನುಕೂಲವಾಗಲೆಂದು ಸಾಮೂಹಿಕ ವಿವಾಹ ಮಹೋತ್ಸವ ಕಳೆದ 40 ವರ್ಷಗಳಿಂದ ಆಯೋಜಿಸಿತ ಬಂದಿರುವ ಎಪಿಎಂಸಿ ವರ್ತಕರಿಗೆ ಹಾಗೂ ಸಂಘದವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಹತ್ತಾರು ಜನ ಪೂಜ್ಯರು ಹಾಗೂ ಗಣ್ಯರ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ಎಂದು ನವ ಜೋಡಿಗಳಿಗೆ ಶುಭ ಹಾರೈಸಿದರು.

ಅಲ್ಲದೆ, ಶರಣ ಸಂಸ್ಕೃತಿ ಮಹೋತ್ಸವದ ಈ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ನೀವುಗಳು ಸುಖ ಸಂಸಾರ ಸಾಗಿಸಿದರೆ ವಿವಾಹ ಮಹೋತ್ಸವ ಆಯೋಜಿಸಿದವರಿಗೂ ಹಾಗೂ ಪೂಜ್ಯ ವಿಜಯ ಮಹಾಂತ ಅಪ್ಪಗಳವರಿಗೂ ಕೃತಜ್ಞತೆ ಸಲ್ಲಿಸಿದಂತಾಗುತ್ತದೆ. ಸದ್ಯ ನಮ್ಮ ದೇಶದ ಜನಸಂಖ್ಯೆ 139 ಕೋಟಿ ದಾಟಿದೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿಯಮದಂತೆ ಆರತಿಗೆ ಒಬ್ಬಳು ಕೀರ್ತಿಗೆ ಒಬ್ಬ ಎಂಬಂತೆ ಎರಡು ಮಕ್ಕಳನ್ನು ಹಂದಿ ಸುಖ ಜೀವನ ಸಾಗಿಸಿ ಎಂದು ಕಿವಿಮಾತು ಹೇಳಿದರು.

ಸಾನಿಧ್ಯ ವಹಿಸಿದ್ದ ಗುರು ಮಹಾಂತ ಶ್ರೀಗಳು ಮಾತನಾಡಿ, ನವ ಜೀವನಕ್ಕೆ ಕಾಲಿಡುತ್ತಿರುವ ವರರು ತಮ್ಮಲ್ಲಿರುವ ದುಶ್ಚಟಗಳನ್ನು ಇಂದಿನಿಂದಲೇ ಈ ಕ್ಷೇತ್ರದಲ್ಲಿಯೇ ತ್ಯಜಿಸಿ ಪೂಜ್ಯರ ಪಾದಕ್ಕೆ ಅರ್ಪಿಸಬೇಕು. ದುಶ್ಚಟಗಳನ್ನು ತ್ಯಜಿಸಿದಾಗ ಮಾತ್ರ ಸುಖ ಜೀವನ ಸಾಗಿಸಲು ಸಾಧ್ಯ ಎಂದು ಆಶೀರ್ವಚನ ನೀಡಿದರು.

ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಕಾರ್ಯಕ್ರಮದ ವೇದಿಕೆ ಮೇಲೆ ಎಪಿಎಂಸಿ ವರ್ತಕರಾದ ಮಹಾಂತಗೌಡ ಪಾಟೀಲ್ ತೊಂಡಿಹಾಳ, ಅಮರೇಶ್ ಗೌಡರ್, ಸಂಗಣ್ಣ ಕಂಪ್ಲಿ, ಹಿರಿಯರಾದ ಜಿಪಿ ಪಾಟೀಲ್, ಶಿವರುದ್ರಪ್ಪ ಗೊಂಗಡಶೆಟ್ಟಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ