21 couples who entered a new life in a mass wedding celebration

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಇಳಕಲ್: ನಗರದ ಆರಾಧ್ಯ ದೈವ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 21 ನವ ವಧುವರರು ಹೊಸ ಜೀವನಕ್ಕೆ ಕಾಲಿಟ್ಟರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಬಸವ ತತ್ವದ ಅನುಸಾರವಾಗಿ ಪೂಜ್ಯ ಗುರುಮಂತ ಶ್ರೀಗಳ ಹಾಗೂ ರಾಜ್ಯದ ವಿವಿಧ ಮಠಗಳ ಮಠಾಧೀಶರ ಸಾನಿಧ್ಯದಲ್ಲಿ ಇಳಕಲ್ ನಗರದ ಎಪಿಎಂಸಿ ವರ್ತಕರ ಸಂಘ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವೇದಿಕೆ ಮೇಲಿದ್ದ ಪೂಜ್ಯರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ಬಡವರಿಗೆ ಅನುಕೂಲವಾಗಲೆಂದು ಸಾಮೂಹಿಕ ವಿವಾಹ ಮಹೋತ್ಸವ ಕಳೆದ 40 ವರ್ಷಗಳಿಂದ ಆಯೋಜಿಸಿತ ಬಂದಿರುವ ಎಪಿಎಂಸಿ ವರ್ತಕರಿಗೆ ಹಾಗೂ ಸಂಘದವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಹತ್ತಾರು ಜನ ಪೂಜ್ಯರು ಹಾಗೂ ಗಣ್ಯರ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ಎಂದು ನವ ಜೋಡಿಗಳಿಗೆ ಶುಭ ಹಾರೈಸಿದರು.

ಅಲ್ಲದೆ, ಶರಣ ಸಂಸ್ಕೃತಿ ಮಹೋತ್ಸವದ ಈ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ನೀವುಗಳು ಸುಖ ಸಂಸಾರ ಸಾಗಿಸಿದರೆ ವಿವಾಹ ಮಹೋತ್ಸವ ಆಯೋಜಿಸಿದವರಿಗೂ ಹಾಗೂ ಪೂಜ್ಯ ವಿಜಯ ಮಹಾಂತ ಅಪ್ಪಗಳವರಿಗೂ ಕೃತಜ್ಞತೆ ಸಲ್ಲಿಸಿದಂತಾಗುತ್ತದೆ. ಸದ್ಯ ನಮ್ಮ ದೇಶದ ಜನಸಂಖ್ಯೆ 139 ಕೋಟಿ ದಾಟಿದೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿಯಮದಂತೆ ಆರತಿಗೆ ಒಬ್ಬಳು ಕೀರ್ತಿಗೆ ಒಬ್ಬ ಎಂಬಂತೆ ಎರಡು ಮಕ್ಕಳನ್ನು ಹಂದಿ ಸುಖ ಜೀವನ ಸಾಗಿಸಿ ಎಂದು ಕಿವಿಮಾತು ಹೇಳಿದರು.

ಸಾನಿಧ್ಯ ವಹಿಸಿದ್ದ ಗುರು ಮಹಾಂತ ಶ್ರೀಗಳು ಮಾತನಾಡಿ, ನವ ಜೀವನಕ್ಕೆ ಕಾಲಿಡುತ್ತಿರುವ ವರರು ತಮ್ಮಲ್ಲಿರುವ ದುಶ್ಚಟಗಳನ್ನು ಇಂದಿನಿಂದಲೇ ಈ ಕ್ಷೇತ್ರದಲ್ಲಿಯೇ ತ್ಯಜಿಸಿ ಪೂಜ್ಯರ ಪಾದಕ್ಕೆ ಅರ್ಪಿಸಬೇಕು. ದುಶ್ಚಟಗಳನ್ನು ತ್ಯಜಿಸಿದಾಗ ಮಾತ್ರ ಸುಖ ಜೀವನ ಸಾಗಿಸಲು ಸಾಧ್ಯ ಎಂದು ಆಶೀರ್ವಚನ ನೀಡಿದರು.

ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಕಾರ್ಯಕ್ರಮದ ವೇದಿಕೆ ಮೇಲೆ ಎಪಿಎಂಸಿ ವರ್ತಕರಾದ ಮಹಾಂತಗೌಡ ಪಾಟೀಲ್ ತೊಂಡಿಹಾಳ, ಅಮರೇಶ್ ಗೌಡರ್, ಸಂಗಣ್ಣ ಕಂಪ್ಲಿ, ಹಿರಿಯರಾದ ಜಿಪಿ ಪಾಟೀಲ್, ಶಿವರುದ್ರಪ್ಪ ಗೊಂಗಡಶೆಟ್ಟಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ