25 lakhs of Rs. A chance to win a scholarship Nothing that is given for free has long-lasting value: Biradara

25 ಲಕ್ಷ ರೂ. ಶಿಷ್ಯವೇತನ ಗೆಲ್ಲುವ ಅವಕಾಶಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚು ಕಾಲ ಮೌಲ್ಯವಿಲ್ಲ: ಬಿರಾದಾರ

25 ಲಕ್ಷ ರೂ. ಶಿಷ್ಯವೇತನ ಗೆಲ್ಲುವ ಅವಕಾಶಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚು ಕಾಲ ಮೌಲ್ಯವಿಲ್ಲ: ಬಿರಾದಾರ

ಮುದ್ದೇಬಿಹಾಳ : ಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚಿನ ಕಾಲದವರೆಗೆ ಮೌಲ್ಯ ಇರುವುದಿಲ್ಲ. ಈ ದೆಸೆಯಲ್ಲಿ ನಾವು ನಮ್ಮ ಸಂಸ್ಥೆಯಿಂದ ಯಾವುದನ್ನೂ ಉಚಿತವಾದ ಘೋಷಣೆ ಮಾಡುತ್ತಿಲ್ಲ ಎಂದು
ಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಹಡಲಗೇರಿ ಸೀಮೆಯ ವ್ಯಾಪ್ತಿಯಲ್ಲಿ ಬರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನ ಮುಂದುವರೆದಿದೆ. ಮುಂದೊಂದು ದಿನ ತರಗತಿಗಳಲ್ಲಿ ಶಿಕ್ಷಕರಿಲ್ಲದೇ ಪಾಠಗಳನ್ನು ಮಾಡುವ ಪರಿಸ್ಥಿತಿ ಬರುತ್ತದೆ. ಆರ್ಟಿಫಿಷಿಯಲ್ ಇಂಟಿಲಿಜೆನ್ಸ್ ಅಂತಹ ತಂತ್ರಜ್ಞಾನದ ಮಟ್ಟಕ್ಕೆ ನಮ್ಮ ಮಕ್ಕಳನ್ನು ರೂಪಿಸುವ ಅಗತ್ಯತೆ ಇದೆ ಎಂದು ಹೇಳಿದರು.
ನಮ್ಮಲ್ಲಿ ಸಿಬಿಎಸ್‌ಇ ಸಿಲೆಬಸ್ ಮಾದರಿಯ ಶಿಕ್ಷಣ ನೀಡುತ್ತಿದ್ದು 4-8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಅವಾರ್ಡ್ ಎಕ್ಸಾಂ ನಡೆಸುತ್ತಿದ್ದೇವೆ ಎಂದು ತಿಳಿಸಿದರಲ್ಲದೇ ದೂರದ ಜಿಲ್ಲೆಗಳಿಗೆ ನಮ್ಮ ಭಾಗದ ಮಕ್ಕಳನ್ನು ಕಳಿಸದೇ ನಮ್ಮ ಭಾಗದಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡುವುದೊಂದೇ ನಮ್ಮ ಗುರಿಯಾಗಿದೆ ಎಂದು ಉತ್ತರಿಸಿದರು.

ಸಂಸ್ಥೆಯ ಆಡಳಿತ ಮಂಡಳಿ ವ್ಯವಸ್ಥಾಪಕ ಪ್ರಭುಗೌಡ ಬಿರಾದಾರ ಮಾತನಾಡಿ, ಏ.6 ರಂದು ಬೆಳಗ್ಗೆ 10ಕ್ಕೆ ಪರೀಕ್ಷೆ ನಡೆಯಲಿದ್ದು 4-8 ನೇ ತರಗತಿ ಪರೀಕ್ಷೆಗೆ ಹಾಜರಾಗಿ ಮೊದಲ 1-10ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ, 15-25 ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಶೇ.15 ರಷ್ಟು, 25-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶೇ.10 ರಷ್ಟು , 40-60 ರಷ್ಟು ರಿಯಾಯಿತಿ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶೇ.5 ರಷ್ಟು ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಪ್ರತಿ ವರ್ಗಕ್ಕೆ ಹತ್ತು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.

ಶಾಲೆಯ ಪ್ರಾಚಾರ್ಯೆ ಸುಪರ್ಣಾ ದಾಸ್ ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ಆಯಾಮದಲ್ಲೂ ಶಿಕ್ಷಣ ನೀಡಲಾಗುತ್ತಿದೆ. ದೈಹಿಕ, ಮನೋವಿಕಾಸ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಸಂಗೀತ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದರು. ಶಿಕ್ಷಕ ಮಿದುನ್ ಇದ್ದರು. ಪರೀಕ್ಷೆಗೆ ಹೆಸರು ನೋಂದಾಯಿಸಲು ಮೊ.9035054452ಗೆ ವಾಟ್ಸಪ್ ಮಾಡಬಹುದು. ಹೆಚ್ಚಿನ ವಿವರಗಳಿಗೆ ಮೊ.9035054453,9035054454 ಸಂಪರ್ಕಿಸಬಹುದಾಗಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ