ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ ಮದುವೆಗಳ ಸಂಖ್ಯೆ ಇಳಿಮುಖವಾಗಿದ್ದು ಇಂತಹ ದೇವಸ್ಥಾನಗಳಲ್ಲಿ ಮದುವೆ ಕಾರ್ಯಗಳು ಹೆಚ್ಚುತ್ತಾ ಸಾಗಿರುವುದು ಶ್ಲಾಘನೀಯ ಸಂಗತಿ ಎಂದರು.

ಕುAಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ಮದುವೆಯ ಮುಂಚೆಯೇ ಫೋಟೋ ಶೂಟ್‌ಗೆಂದೆ 5-10 ಲಕ್ಷ ರೂ.ಖರ್ಚು ಮಾಡುವ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು.ಸಮಾಜದಲ್ಲಿ ಮಾದರಿ ಮದುವೆಗಳಿಗೆ ಸಹಕಾರ ನೀಡಬೇಕು.ಮಂಗಳಮುಖಿಯರನ್ನು ಮುಖ್ಯವಾಹಿನಿಗೆ ತರಬೇಕು ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಮಾತನಾಡಿ, ಮಂಗಳಮುಖಿಯರಿಗೆ ಶಿಕ್ಷಣ ಕೊಡುವ ಕಾರ್ಯ ಆಗಬೇಕು.ನಿಮ್ಮ ಮನೆಯಲ್ಲಿ ತೃತೀಯ ಲಿಂಗಿ ಜನಿಸಿದ್ದರೆ ಅವರನ್ನು ಕಡೆಗಣಿಸಬೇಡಿ.ಅವರಿಗೆ ಒಳ್ಳೆಯ ಶಿಕ್ಷಣ ಕೊಟ್ಟರೆ ಉತ್ತಮ ಆಸ್ತಿ ನಿಮಗೆ ಆಗುತ್ತಾರೆ.ಶಿಕ್ಷಣ ದೊರೆಯದ್ದಕ್ಕೆನೇ ಹೈವೆ ಪಕ್ಕದಲ್ಲಿ,ರೈಲು ,ಬಸ್ ನಿಲ್ದಾಣಗಳಲ್ಲಿ ಮತ್ತೊಬ್ಬರ ಎದುರಿಗೆ ಕೈ ಚಾಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಸರ್ಕಾರ ಸಮಾಜದ ಪ್ರಗತಿಪರ ಸಂಘಟನೆಗಳು ಮಂಗಳಮುಖಿಯರಿಗೆ ಅನುಕಂಪ ತೋರುವ ಬದಲು ಉದ್ಯೋಗವಕಾಶಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯ ಭೂಮಿಕೆಗೆ ತರಬಹುದಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬಿಲ್‌ಕೆರೂರ ಬಿಲ್ವಾಶ್ರಮದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳು ಬಡವರ ಮದುವೆಗಳಲ್ಲ.ಭಾಗ್ಯವಂತರ ಮದುವೆಗಳಾಗಿವೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಹೋದರ ನಾಗರಾಜ ತಂಗಡಗಿ, ಕಾರ್ಯಕ್ರಮದ ನೇತೃತ್ವ ವಹಿಸಿದ್ದ ದೇವಿ ಆರಾಧಕ ಶಾಂತಪ್ಪ ಪೂಜಾರಿ,ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಶ್ರೀ,ಬಳವಾಟದ ಸೋಮಶೇಖರ ಶಿವಾಚಾರ್ಯರು,ದೇವಿ ಆರಾಧಕರಾದ ಮುತ್ತಪ್ಪ ಪೂಜಾರಿ,ಗ್ರಾಪಂ ಮಾಜಿ ಸದಸ್ಯ ಮಂಜು ಪೂಜಾರಿ, ಮುಖಂಡರಾದ ಸಂಗಣ್ಣ ಗುಳೇದಗುಡ್ಡ, ಸಂಗಣ್ಣ ದೇವರಮನಿ,ಚರಲಿಂಗಪ್ಪ ಹಾದಿಮನಿ,ರಾಮು ಲಿಂಗದಳ್ಳಿ, ಈಶ್ವರ ಗಡ್ಡಿ, ಎಂ.ಡಿ.ತಾರನಾಳ,ಸಿ.ಎಫ್.ನಾವಿ,ಸುರೇಶ ಹಾದಿಮನಿ ಮೊದಲಾದವರು ಇದ್ದರು.

26 ಜೋಡಿ ನವಜೀವನಕ್ಕೆ :
ತಂಗಡಗಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 26 ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿ ಸಿಬ್ಬಂದಿ ಬಾಲ್ಯವಿವಾಹ ಆಗದಂತೆ ನೋಡಿಕೊಂಡರು.ಪೊಲೀಸ್ ಇಲಾಖೆಯ ಸಿಬ್ಬಂದಿ ರಸ್ತೆ ಸಂಚಾರ ದಟ್ಟಣೆ ಆಗದಂತೆ ನೋಡಿಕೊಂಡರು.

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್