ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ ಮದುವೆಗಳ ಸಂಖ್ಯೆ ಇಳಿಮುಖವಾಗಿದ್ದು ಇಂತಹ ದೇವಸ್ಥಾನಗಳಲ್ಲಿ ಮದುವೆ ಕಾರ್ಯಗಳು ಹೆಚ್ಚುತ್ತಾ ಸಾಗಿರುವುದು ಶ್ಲಾಘನೀಯ ಸಂಗತಿ ಎಂದರು.

ಕುAಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ಮದುವೆಯ ಮುಂಚೆಯೇ ಫೋಟೋ ಶೂಟ್‌ಗೆಂದೆ 5-10 ಲಕ್ಷ ರೂ.ಖರ್ಚು ಮಾಡುವ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು.ಸಮಾಜದಲ್ಲಿ ಮಾದರಿ ಮದುವೆಗಳಿಗೆ ಸಹಕಾರ ನೀಡಬೇಕು.ಮಂಗಳಮುಖಿಯರನ್ನು ಮುಖ್ಯವಾಹಿನಿಗೆ ತರಬೇಕು ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಮಾತನಾಡಿ, ಮಂಗಳಮುಖಿಯರಿಗೆ ಶಿಕ್ಷಣ ಕೊಡುವ ಕಾರ್ಯ ಆಗಬೇಕು.ನಿಮ್ಮ ಮನೆಯಲ್ಲಿ ತೃತೀಯ ಲಿಂಗಿ ಜನಿಸಿದ್ದರೆ ಅವರನ್ನು ಕಡೆಗಣಿಸಬೇಡಿ.ಅವರಿಗೆ ಒಳ್ಳೆಯ ಶಿಕ್ಷಣ ಕೊಟ್ಟರೆ ಉತ್ತಮ ಆಸ್ತಿ ನಿಮಗೆ ಆಗುತ್ತಾರೆ.ಶಿಕ್ಷಣ ದೊರೆಯದ್ದಕ್ಕೆನೇ ಹೈವೆ ಪಕ್ಕದಲ್ಲಿ,ರೈಲು ,ಬಸ್ ನಿಲ್ದಾಣಗಳಲ್ಲಿ ಮತ್ತೊಬ್ಬರ ಎದುರಿಗೆ ಕೈ ಚಾಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಸರ್ಕಾರ ಸಮಾಜದ ಪ್ರಗತಿಪರ ಸಂಘಟನೆಗಳು ಮಂಗಳಮುಖಿಯರಿಗೆ ಅನುಕಂಪ ತೋರುವ ಬದಲು ಉದ್ಯೋಗವಕಾಶಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯ ಭೂಮಿಕೆಗೆ ತರಬಹುದಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬಿಲ್‌ಕೆರೂರ ಬಿಲ್ವಾಶ್ರಮದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳು ಬಡವರ ಮದುವೆಗಳಲ್ಲ.ಭಾಗ್ಯವಂತರ ಮದುವೆಗಳಾಗಿವೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಹೋದರ ನಾಗರಾಜ ತಂಗಡಗಿ, ಕಾರ್ಯಕ್ರಮದ ನೇತೃತ್ವ ವಹಿಸಿದ್ದ ದೇವಿ ಆರಾಧಕ ಶಾಂತಪ್ಪ ಪೂಜಾರಿ,ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಶ್ರೀ,ಬಳವಾಟದ ಸೋಮಶೇಖರ ಶಿವಾಚಾರ್ಯರು,ದೇವಿ ಆರಾಧಕರಾದ ಮುತ್ತಪ್ಪ ಪೂಜಾರಿ,ಗ್ರಾಪಂ ಮಾಜಿ ಸದಸ್ಯ ಮಂಜು ಪೂಜಾರಿ, ಮುಖಂಡರಾದ ಸಂಗಣ್ಣ ಗುಳೇದಗುಡ್ಡ, ಸಂಗಣ್ಣ ದೇವರಮನಿ,ಚರಲಿಂಗಪ್ಪ ಹಾದಿಮನಿ,ರಾಮು ಲಿಂಗದಳ್ಳಿ, ಈಶ್ವರ ಗಡ್ಡಿ, ಎಂ.ಡಿ.ತಾರನಾಳ,ಸಿ.ಎಫ್.ನಾವಿ,ಸುರೇಶ ಹಾದಿಮನಿ ಮೊದಲಾದವರು ಇದ್ದರು.

26 ಜೋಡಿ ನವಜೀವನಕ್ಕೆ :
ತಂಗಡಗಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 26 ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿ ಸಿಬ್ಬಂದಿ ಬಾಲ್ಯವಿವಾಹ ಆಗದಂತೆ ನೋಡಿಕೊಂಡರು.ಪೊಲೀಸ್ ಇಲಾಖೆಯ ಸಿಬ್ಬಂದಿ ರಸ್ತೆ ಸಂಚಾರ ದಟ್ಟಣೆ ಆಗದಂತೆ ನೋಡಿಕೊಂಡರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ