ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ ಮದುವೆಗಳ ಸಂಖ್ಯೆ ಇಳಿಮುಖವಾಗಿದ್ದು ಇಂತಹ ದೇವಸ್ಥಾನಗಳಲ್ಲಿ ಮದುವೆ ಕಾರ್ಯಗಳು ಹೆಚ್ಚುತ್ತಾ ಸಾಗಿರುವುದು ಶ್ಲಾಘನೀಯ ಸಂಗತಿ ಎಂದರು.

ಕುAಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ಮದುವೆಯ ಮುಂಚೆಯೇ ಫೋಟೋ ಶೂಟ್‌ಗೆಂದೆ 5-10 ಲಕ್ಷ ರೂ.ಖರ್ಚು ಮಾಡುವ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು.ಸಮಾಜದಲ್ಲಿ ಮಾದರಿ ಮದುವೆಗಳಿಗೆ ಸಹಕಾರ ನೀಡಬೇಕು.ಮಂಗಳಮುಖಿಯರನ್ನು ಮುಖ್ಯವಾಹಿನಿಗೆ ತರಬೇಕು ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಮಾತನಾಡಿ, ಮಂಗಳಮುಖಿಯರಿಗೆ ಶಿಕ್ಷಣ ಕೊಡುವ ಕಾರ್ಯ ಆಗಬೇಕು.ನಿಮ್ಮ ಮನೆಯಲ್ಲಿ ತೃತೀಯ ಲಿಂಗಿ ಜನಿಸಿದ್ದರೆ ಅವರನ್ನು ಕಡೆಗಣಿಸಬೇಡಿ.ಅವರಿಗೆ ಒಳ್ಳೆಯ ಶಿಕ್ಷಣ ಕೊಟ್ಟರೆ ಉತ್ತಮ ಆಸ್ತಿ ನಿಮಗೆ ಆಗುತ್ತಾರೆ.ಶಿಕ್ಷಣ ದೊರೆಯದ್ದಕ್ಕೆನೇ ಹೈವೆ ಪಕ್ಕದಲ್ಲಿ,ರೈಲು ,ಬಸ್ ನಿಲ್ದಾಣಗಳಲ್ಲಿ ಮತ್ತೊಬ್ಬರ ಎದುರಿಗೆ ಕೈ ಚಾಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಸರ್ಕಾರ ಸಮಾಜದ ಪ್ರಗತಿಪರ ಸಂಘಟನೆಗಳು ಮಂಗಳಮುಖಿಯರಿಗೆ ಅನುಕಂಪ ತೋರುವ ಬದಲು ಉದ್ಯೋಗವಕಾಶಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯ ಭೂಮಿಕೆಗೆ ತರಬಹುದಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬಿಲ್‌ಕೆರೂರ ಬಿಲ್ವಾಶ್ರಮದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳು ಬಡವರ ಮದುವೆಗಳಲ್ಲ.ಭಾಗ್ಯವಂತರ ಮದುವೆಗಳಾಗಿವೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಹೋದರ ನಾಗರಾಜ ತಂಗಡಗಿ, ಕಾರ್ಯಕ್ರಮದ ನೇತೃತ್ವ ವಹಿಸಿದ್ದ ದೇವಿ ಆರಾಧಕ ಶಾಂತಪ್ಪ ಪೂಜಾರಿ,ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಶ್ರೀ,ಬಳವಾಟದ ಸೋಮಶೇಖರ ಶಿವಾಚಾರ್ಯರು,ದೇವಿ ಆರಾಧಕರಾದ ಮುತ್ತಪ್ಪ ಪೂಜಾರಿ,ಗ್ರಾಪಂ ಮಾಜಿ ಸದಸ್ಯ ಮಂಜು ಪೂಜಾರಿ, ಮುಖಂಡರಾದ ಸಂಗಣ್ಣ ಗುಳೇದಗುಡ್ಡ, ಸಂಗಣ್ಣ ದೇವರಮನಿ,ಚರಲಿಂಗಪ್ಪ ಹಾದಿಮನಿ,ರಾಮು ಲಿಂಗದಳ್ಳಿ, ಈಶ್ವರ ಗಡ್ಡಿ, ಎಂ.ಡಿ.ತಾರನಾಳ,ಸಿ.ಎಫ್.ನಾವಿ,ಸುರೇಶ ಹಾದಿಮನಿ ಮೊದಲಾದವರು ಇದ್ದರು.

26 ಜೋಡಿ ನವಜೀವನಕ್ಕೆ :
ತಂಗಡಗಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 26 ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿ ಸಿಬ್ಬಂದಿ ಬಾಲ್ಯವಿವಾಹ ಆಗದಂತೆ ನೋಡಿಕೊಂಡರು.ಪೊಲೀಸ್ ಇಲಾಖೆಯ ಸಿಬ್ಬಂದಿ ರಸ್ತೆ ಸಂಚಾರ ದಟ್ಟಣೆ ಆಗದಂತೆ ನೋಡಿಕೊಂಡರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,