3-day hunger strike for government school survival

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಲಭ್ಯ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ. ಇದರ ಜೊತೆಗೆ “ಮ್ಯಾಗ್ನೆಟ್ ಶಾಲೆಗಳು ಹಾಗೂ ಕೆಪಿಎಸ್ ಶಾಲೆಗಳು ಎಂಬ ಹೆಸರಿನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಶಾಶ್ವತವಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ದಲ್ಲಾಳಿಯಾಗಿ ಸರ್ಕಾರ ಸಮಾಜ ವಿರೋಧಿ, ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಸಮಯ ಬಂದಿದೆ.

ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗಳೇ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ಆದ್ದರಿಂದ ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿಯನ್ನು ಜಾರಿಗೆ ತಂದು, ಇವತ್ತಿನ ದಿನ ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ ಬಡವರ ಮಕ್ಕಳಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಮಂಡ್ಯ ಜಿಲ್ಲಾ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘ ಮೂರು ದಿನಗಳ ಉಪವಾಸ ಸತ್ಯಾಗ್ರಹ ಕೈಗೊಂಡಿದೆ.

ಪ್ರಮುಖ ಬೇಡಿಕೆಗಳು :

  1. ರಾಜ್ಯದ 41,905 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲೂ ಎಲ್ಕೆಜಿಯಿಂದ 5ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಸಿಬಿಎಸ್ಸಿ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸಬೇಕು.
  2. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯ್ತಿಯಲ್ಲೂ 6ನೇ ತರಗತಿಯಿಂದ 12ನೇ ತರಗತಿಯವರೆಗೆ ನವೋದಯ ಮಾದರಿ ಸಿಬಿಎಸ್ಸಿ ವಸತಿ ಶಾಲಾ ಶಿಕ್ಷಣ ನೀಡಬೇಕು.
  3. ಕೊನೆಯದಾಗಿ ಸರ್ಕಾರಕ್ಕೆ ಯೋಗ್ಯತೆ ಇಲ್ಲವಾದರೆ ಶಿಕ್ಷಣ ಇಲಾಖೆಯ ಅನುದಾನವನ್ನು ನೇರವಾಗಿ ಪ್ರತಿಯೊಂದು ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಖಾತೆಗೆ ವರ್ಗಹಿಸಿದರೆ, ಹಾಲಿನ ಡೈರಿ ರೀತಿ, ಎಸ್‌ಡಿಎಂಸಿಯವರೇ ಶಿಕ್ಷಕರ ನೇಮಕ ಮಾಡಿ, ಮೂಲಭೂತ ಸೌಕರ್ಯ ಒದಗಿಸಿ ಶಾಲೆಗಳನ್ನು ಮುನ್ನಡೆಸಿ, ಸರ್ಕಾರೀ ಶಾಲೆಗಳಿಗೆ ಬೀಗ ಹಾಕುವ ಕೆಲಸಕ್ಕೆ ಶಾಶ್ವತವಾಗಿ ತೆರೆ ಎಳೆಯಲಿದ್ದಾರೆ.

ಈ ಸಂಧರ್ಭದಲ್ಲಿ ಅಶ್ವತ. ಟಿ.ಮರಿಗೌಡ ನೆರವು ಕಟ್ಟಡ ಮತ್ತು ಅಸಂಘಟಿತ ಸಂಘ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು, ಸಂತೋಷ್ ಮಂಡ್ಯ ಗೌಡ, ಇಂಡುವಾಳ ಚಂದ್ರಶೇಖರ್, ಶಿವಳ್ಳಿ ಚಂದ್ರಶೇಖರ್, ಅನೀಲ್ ಕುಮಾರ್.ವಿ.ಎಮ್. ರೇವಣ ಮೈಸೂರ್, ಮಂಡ್ಯ ಜಿಲ್ಲಾ ರೈತರ ಸಂಘ, ಹಾಗೂ ಕರ್ನಾಟಕ ರಾಜ್ಯ ಎಸ್.ಡಿ.ಎಮ್.ಸಿ.ಸಂಘ ಪದಾಧಿಕಾರಿಗಳು ಮತ್ತು ನೆರವು ಮಂಡ್ಯ ಅಧ್ಯಕ್ಷರ ನವೀನ ಕುಮಾರ, ನೆರವು ಮಳವಳ್ಳಿ ತಾಲೂಕು ಅಧ್ಯಕ್ಷರು ವಿನೋದ ಕುಮಾರ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಬೋರೇಗೌಡ. ಟಿ ಎಂ ಮತ್ತು ಕರ್ನಾಟಕ ತುಂಬೆಲ್ಲಾ ಇರುವ ನೆರವು ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದರು.

ವರದಿ : ಶಿವು ರಾಠೋಡ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ