3-day hunger strike for government school survival

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಲಭ್ಯ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ. ಇದರ ಜೊತೆಗೆ “ಮ್ಯಾಗ್ನೆಟ್ ಶಾಲೆಗಳು ಹಾಗೂ ಕೆಪಿಎಸ್ ಶಾಲೆಗಳು ಎಂಬ ಹೆಸರಿನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಶಾಶ್ವತವಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ದಲ್ಲಾಳಿಯಾಗಿ ಸರ್ಕಾರ ಸಮಾಜ ವಿರೋಧಿ, ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಸಮಯ ಬಂದಿದೆ.

ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗಳೇ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ಆದ್ದರಿಂದ ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿಯನ್ನು ಜಾರಿಗೆ ತಂದು, ಇವತ್ತಿನ ದಿನ ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ ಬಡವರ ಮಕ್ಕಳಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಮಂಡ್ಯ ಜಿಲ್ಲಾ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘ ಮೂರು ದಿನಗಳ ಉಪವಾಸ ಸತ್ಯಾಗ್ರಹ ಕೈಗೊಂಡಿದೆ.

ಪ್ರಮುಖ ಬೇಡಿಕೆಗಳು :

  1. ರಾಜ್ಯದ 41,905 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲೂ ಎಲ್ಕೆಜಿಯಿಂದ 5ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಸಿಬಿಎಸ್ಸಿ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸಬೇಕು.
  2. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯ್ತಿಯಲ್ಲೂ 6ನೇ ತರಗತಿಯಿಂದ 12ನೇ ತರಗತಿಯವರೆಗೆ ನವೋದಯ ಮಾದರಿ ಸಿಬಿಎಸ್ಸಿ ವಸತಿ ಶಾಲಾ ಶಿಕ್ಷಣ ನೀಡಬೇಕು.
  3. ಕೊನೆಯದಾಗಿ ಸರ್ಕಾರಕ್ಕೆ ಯೋಗ್ಯತೆ ಇಲ್ಲವಾದರೆ ಶಿಕ್ಷಣ ಇಲಾಖೆಯ ಅನುದಾನವನ್ನು ನೇರವಾಗಿ ಪ್ರತಿಯೊಂದು ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಖಾತೆಗೆ ವರ್ಗಹಿಸಿದರೆ, ಹಾಲಿನ ಡೈರಿ ರೀತಿ, ಎಸ್‌ಡಿಎಂಸಿಯವರೇ ಶಿಕ್ಷಕರ ನೇಮಕ ಮಾಡಿ, ಮೂಲಭೂತ ಸೌಕರ್ಯ ಒದಗಿಸಿ ಶಾಲೆಗಳನ್ನು ಮುನ್ನಡೆಸಿ, ಸರ್ಕಾರೀ ಶಾಲೆಗಳಿಗೆ ಬೀಗ ಹಾಕುವ ಕೆಲಸಕ್ಕೆ ಶಾಶ್ವತವಾಗಿ ತೆರೆ ಎಳೆಯಲಿದ್ದಾರೆ.

ಈ ಸಂಧರ್ಭದಲ್ಲಿ ಅಶ್ವತ. ಟಿ.ಮರಿಗೌಡ ನೆರವು ಕಟ್ಟಡ ಮತ್ತು ಅಸಂಘಟಿತ ಸಂಘ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು, ಸಂತೋಷ್ ಮಂಡ್ಯ ಗೌಡ, ಇಂಡುವಾಳ ಚಂದ್ರಶೇಖರ್, ಶಿವಳ್ಳಿ ಚಂದ್ರಶೇಖರ್, ಅನೀಲ್ ಕುಮಾರ್.ವಿ.ಎಮ್. ರೇವಣ ಮೈಸೂರ್, ಮಂಡ್ಯ ಜಿಲ್ಲಾ ರೈತರ ಸಂಘ, ಹಾಗೂ ಕರ್ನಾಟಕ ರಾಜ್ಯ ಎಸ್.ಡಿ.ಎಮ್.ಸಿ.ಸಂಘ ಪದಾಧಿಕಾರಿಗಳು ಮತ್ತು ನೆರವು ಮಂಡ್ಯ ಅಧ್ಯಕ್ಷರ ನವೀನ ಕುಮಾರ, ನೆರವು ಮಳವಳ್ಳಿ ತಾಲೂಕು ಅಧ್ಯಕ್ಷರು ವಿನೋದ ಕುಮಾರ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಬೋರೇಗೌಡ. ಟಿ ಎಂ ಮತ್ತು ಕರ್ನಾಟಕ ತುಂಬೆಲ್ಲಾ ಇರುವ ನೆರವು ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದರು.

ವರದಿ : ಶಿವು ರಾಠೋಡ

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,