4.40 lakh rupees profit for TAPCMS

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು.

ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ ತೆರೆಯಲು ಸೂಚಿಸಿದ್ದರೂ ನಮ್ಮಲ್ಲಿ ತೆರಯಲು ಉದ್ದು ಉತ್ಪಾದನೆ ಇಲ್ಲ. ಹೀಗಾಗಿ ಕೇಂದ್ರ ತೆರೆದಿಲ್ಲ ಎಂದು ತಿಳಿಸಿದರು.

ಸಂಘದ ಪ್ರಭಾರಿ ವ್ಯವಸ್ಥಾಪಕ ಹಾಗೂ ಸಹಕಾರಿ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಮಾತನಾಡಿ, ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಓದಿ ಹೇಳಿದರು.

ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸೋಮನಗೌಡ ಬಿರಾದಾರ ಮಾತನಾಡಿದರು.

ಹಿರಿಯ ನ್ಯಾಯವಾದಿ ಆರ್.ಬಿ.ಪಾಟೀಲ್,ಸಂಘದ ಅಧ್ಯಕ್ಷ ಮನೋಹರ ಮೇಟಿ(ಬಸರಕೋಡ), ಉಪಾಧ್ಯಕ್ಷ ಜಿ.ಬಿ.ಹತ್ತೂರ, ನಿರ್ದೇಶಕರಾದ ಚಿದಾನಂದ ಸೀತಿಮನಿ, ಶಂಕರಗೌಡ ಹಿಪ್ಪರಗಿ, ಎಂ.ಕೆ.ಮುತ್ತಣ್ಣವರ,ಪಿ.ಪಿ.ಯಾಳವಾರ,ಶ್ರೀದೇವಿ ಮಾಲಗತ್ತಿ, ಚನ್ನಮ್ಮ ಲಕ್ಕುಂಡಿ ಇದ್ದರು.

ಸಂಘದ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿಬ್ಬಂದಿ ಎಂ.ಎಸ್.ಪಾಟೀಲ್, ಎಸ್.ಎಂ.ಚೌದ್ರಿ, ಬಿ.ಎಂ.ಬಿರಾದಾರ, ಎಸ್.ಜಿ.ಕೊಳ್ಳಿ ಕಾರ್ಯಕ್ರಮದ ನಿರ್ವಹಣೆ ಮಾಡಿದರು.

ಇದನ್ನೂ ಓದಿ: Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

ಟಿಎಪಿಸಿಎಂಎಸ್‌ನಿಂದ ರೈತರು ಬೆಳೆದ ಒಕ್ಕಲುತನ ಹುಟ್ಟುವಳಿ ಮಾರಾಟ ಮಾಡಿಸುವಲ್ಲಿ ಹೆಚ್ಚಿಗೆ ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಾ ಬಂದಿದೆ. ರೈತರಿಗೆ ಸುಧಾರಿಸಿದ ಗೊಬ್ಬರ ವಿತರಿಸಿ ಅನುಕೂಲ ಕಲ್ಪಿಸಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ
ಎಂ.ಎಸ್.ಮೇಟಿ ಹೇಳಿದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ