8.77 lakh rupees profit for Banashankar Sangh

ಬನಶಂಕರಿ ಸಂಘಕ್ಕೆ 8.77 ಲಕ್ಷ ರೂಪಾಯಿ ಲಾಭ

ಬನಶಂಕರಿ ಸಂಘಕ್ಕೆ 8.77 ಲಕ್ಷ ರೂಪಾಯಿ ಲಾಭ

ಮುದ್ದೇಬಿಹಾಳ : ಸಹಕಾರ ಸಂಘದ ಮೂಲಕ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಲು ಮುಂದಾಗುವ ಮೂಲಕ ಬ್ಯಾಂಕಿನ ವಿಶ್ವಾಸಕ್ಕೆ ಗ್ರಾಹಕರು ಪಾತ್ರರಾಗಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸಪ್ಪ ಹೆಬ್ಬಾಳ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಂಘದ ಕಚೇರಿಯಲ್ಲಿ ಮಂಗಳವಾರ 25ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಾಲಿನಲ್ಲಿ ಒಟ್ಟು 8.77 ಲಕ್ಷ ರೂ.ಲಾಭ ಸಂಘ ಮಾಡಿದ್ದು ಮುಂದಿನ ವರ್ಷದ ಒಳಗಾಗಿ ನಾಲತವಾಡದಲ್ಲಿ ಸಂಘದ ಶಾಖೆಯನ್ನು ಆರಂಭಿಸಲಾಗುತ್ತದೆ. ಅಂದೇ 25ನೇ ವರ್ಷದ ಬೆಳ್ಳಿ ಹಬ್ಬವನ್ನು ಆಚರಿಸಲಾಗುವುದು ಎಂದರು.

ಗ್ರಾಹಕರು ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಮರುಪಾವತಿಸುವ ಕಾರ್ಯ ಮಾಡಬೇಕು ಎಂದರು.

ಸಂಘದ ಮಾಜಿ ಅಧ್ಯಕ್ಷ ಕಾಶೀನಾಥ ಹೆಬ್ಬಾಳ, ನಿರ್ದೇಶಕರಾದ ಬಸವರಾಜ ಪಣೇಗೋಳ, ಮುತ್ತಣ್ಣ ಪ್ಯಾಟಿಗೌಡರ, ಚೆನ್ನಬಸ್ಸು ಗುಡ್ಡದ ಮಾತನಾಡಿದರು.ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ , ನಿರ್ದೇಶಕರಾದ ಸುಭಾಷ ರುದ್ರಗಂಟಿ, ಬಸವರಾಜ ಅಗಸಬಾಳ, ಬಸಪ್ಪ ಹುಣಶ್ಯಾಳ, ಈರಪ್ಪ ಆಲೂರ, ದ್ಯಾವಪ್ಪ ಹುಣಶ್ಯಾಳ, ಉಮೇಶ ಪ್ಯಾಟಿಗೌಡರ, ಸಂಗಪ್ಪ ಕಲ್ಲುಂಡಿ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ ಇದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮಿ ಪ್ಯಾಟಿಗೌಡರ ಪ್ರಾರ್ಥಿಸಿದರು. ರಮೇಶ ಪ್ಯಾಟಿಗೌಡರ ನಿರೂಪಿಸಿದರು. ಶಂಕರ ಹೆಬ್ಬಾಳ ವಂದಿಸಿದರು.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ನಾಲ್ವರು ಯುವಕರಿಗೆ ಗಂಭೀರ ಗಾಯ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು