ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ ನೀಡಿಲ್ಲ.ಅನ್ನ ಉಣ್ಣುವ ಪ್ರತಿಯೊಬ್ಬರು ರೈತರ ಹೋರಾಟಕ್ಕೆ ಬೆಂಬಲಿಸಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದ ಸೈನಿಕ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದ ವೇದಿಕೆಯಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದರು.ಅಪ್ಪಾಜಿ ನಾಡಗೌಡರು ಸಂಪೂರ್ಣ ಹತಾಶೆಯಾಗಿದ್ದಾರೆ.ಕಾಂಗ್ರೆಸ್‌ನಲ್ಲಿ ಇವರಿಗೆ ಕಿಮ್ಮತ್ತು ಕೊಡುತ್ತಿಲ್ಲ.ಆರು ಸಲ ಶಾಸಕರಾದರೂ ಮಂತ್ರಿ ಮಾಡಲಿಲ್ಲ.ಕಾಂಗ್ರೆಸ್ ಸರ್ಕಾರ ಇವರ ನಿಗಮದ್ದು ಖುರ್ಚಿ ಕಸಿದುಕೊಂಡಿದೆ.ಮುದ್ದೇಬಿಹಾಳದ ಜನ ಕೂಡಾ ಛೀ ಥೂ ಎನ್ನುತ್ತಿದ್ದಾರೆ.ನಾಡಗೌಡರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ.ಸ್ವಲ್ಪ ದಿನ ಆರೋಗ್ಯದ ಚಿಕಿತ್ಸೆ ಪಡೆದುಕೊಂಡು ಸಾರ್ವಜನಿಕ ಸೇವೆಗೆ ಮರಳಲಿ ಎಂದು ನಡಹಳ್ಳಿ ಹೇಳಿದರು.

ಸೋಮವಾರದ ಒಳಗಡೆ ಕ್ಷೇತ್ರದ ಎರಡೂ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆ ಮಾಡಬೇಕು.ಶಾಸಕ ಅಪ್ಪಾಜಿ ನಾಡಗೌಡರೇ ಹೇಳಿದಂತೆ ಬರಪೀಡಿತ ತಾಲ್ಲೂಕು ಘೋಷಣೆ ಮಾಡದಿದ್ದರೆ ತಹಶೀಲ್ದಾರ್ ಕಚೇರಿ ಒಳಗಡೆ ಧರಣಿ ಕೂಡುತ್ತೇನೆ ಎಂದಿದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಧರಣಿ ಹೂಡಬೇಕು.ಇಲ್ಲದಿದ್ದಲ್ಲಿ ನಿಮಗೆ ಮಾತು ತಪ್ಪಿದ ಮಗ ಎಂಬ ಬಿರುದು ಜನ ಕೊಡುತ್ತಾರೆ.ಜನ ನಿಮ್ಮನ್ನು ಬಣ್ಣ ಬದಲಿಸುವ ಊಸರವಳ್ಳಿಗೆ ಹೋಲಿಸುತ್ತಾರೆ ಎಂದು ನಡಹಳ್ಳಿ ವ್ಯಂಗ್ಯವಾಡಿದರು.

ಅಡವಿ ಹುಲಗಬಾಳದ ರೈತ ಭೀಮಣ್ಣ ಬಿಜ್ಜೂರ ಮಾತನಾಡಿ, ಮಳೆಯಾಗದೇ ಇರುವುದರಿಂದ ಬಿತ್ತನೆ ಮಾಡಿದ ಬೀಜ,ಗೊಬ್ಬರ ಹಾಳಾಗಿದೆ.ಹೊಲಕ್ಕೆ ಹೋಗಬೇಕಾದರೆ ಕಣ್ಣೀರು ಹಾಕುತ್ತಿದ್ದೇವೆ ಎಂದು ಹೇಳಿದರು. ನಾಲತವಾಡ ಚಳಗೇರಿ ಮಾತನಾಡಿ, ಹೊಲಗೊಳದಲ್ಲಿ ಕಬ್ಬು,ಸಜ್ಜಿ,ಸೂರ್ಯಪಾನ,ತೊಗರಿ ಹಾಕಿದ್ದೇವೆ.ಮಳೆ ಇಲ್ಲದೇ ಎಲ್ಲವೂ ಒಣಗಿದೆ.ಎಂಎಲ್ ಅವರು ನೋಡಿದರೆ ಬೆಂಗಳೂರಲ್ಲಿ ಕೂಂತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಎಸ್.ಪಾಟೀಲ್,ಕೆoಚಪ್ಪ ಬಿರಾದಾರ,ಎಂ.ಬಿ.ಅoಗಡಿ,ಸoತೋಷ ಬಾದರಬಂಡಿ,ಗುರುನಾಥ ಬಿರಾದಾರ,ಮಲ್ಲಿಕಾರ್ಜುನ ತಂಗಡಗಿ,ಗೌರಮ್ಮ ಹುನಗುಂದ,ಸoಗಮ್ಮ ದೇವರಳ್ಳಿ,ಶಿವು ಕನ್ನೊಳ್ಳಿ, ಮದನಸ್ವಾಮಿ ಹಿರೇಮಠ, ಜಗದೀಶ ಪಂಪಣ್ಣವರ,ಸoಗಮೇಶ ಮೇಟಿ,ಗಿರೀಶಗೌಡ ಪಾಟೀಲ ಸೇರಿದಂತೆ ನೂರಾರು ರೈತ ಮುಖಂಡರು ಪಾಲ್ಗೊಂಡಿದ್ದರು.

ಕೊಟ್ಟು ಸತ್ರ ನಾವು ಸತ್ತಾಗ ಸಾವಿರ ಮಂದಿ ಅಳತಾರೆ.ಕೂಡಿಟ್ಟು ಸತ್ರ ಸತ್ತಿದ್ದು ಚೊಲೊ ಆಯ್ತೆಳ ಮಗ ಸತ್ತಿದ್ದು ಅನ್ನುತ್ತಾರೆ.ನಾನು ಕೊಟ್ಟು ಸಾಯುವ ಕುಲಕ್ಕೆ ಸೇರಿದವನು.ತಾಲ್ಲೂಕಿನ ರೈತಾಪಿ ವರ್ಗದ,ಅಭಿವೃದ್ಧಿ ಚಿಂತೆ ನನಗಿದೆ.ನಮ್ಮ ರೈತರು ಮುಗ್ದರು. ಜನರು,ರಾಜಕಾರಣಿಗಳು ಬದಲಾಗಬೇಕು.ಜನರನ್ನು ಕತ್ತಲಲ್ಲಿ ಇಟ್ಟು ಆಡಳಿತ ನಡೆಸುವವರ ಬಗ್ಗೆ ಜಾಗೃತಿಯಿಂದಿರಬೇಕು.
-ಎ.ಎಸ್.ಪಾಟೀಲ ನಡಹಳ್ಳಿ,ಮಾಜಿ ಶಾಸಕರು.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ