ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ಜಾಬಲಾಪುರ: ಮಧ್ಯಪ್ರದೇಶದ ಬುರಹಾನಪುರ ಜಿಲ್ಲೆಯ ಕೆಲವು ಪ್ರಸಿದ್ಧ ಸ್ಮಾರಕಗಳು ತನಗೆ ಎಂದು ರಾಜ್ಯದ ವಕ್ಫ್ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿದೆ. ಆ ಸ್ಥಳಗಳಿಂದ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿದೆ.

ಪ್ರಕರಣದ ವಿಚಾರಣೆ ವೇಳೆ ವಕ್ಫ್ ಮಂಡಳಿಯ ವಕೀಲರ ವಿರುದ್ಧ ಹರಿಹಾಯ್ದ ನ್ಯಾಯಪೀಠ, ‘ತಾಜ್ ಮಹಲ್, ಕೆಂಪುಕೋಟೆಯನ್ನೂ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ. ನಿಮಗೆ ಮನಸ್ಸಿಗೆ ಬಂದಾಗ ಯಾವುದೇ ಆಸ್ತಿ ನಮ್ಮದೆಂದು ಘೋಷಿಸಿ ಬಿಡುತ್ತೀರಿ. ನಾಳೆ ನೀವು ಇಡೀ ದೇಶ ವಕ್ಫ್ ಆಸ್ತಿ ಎನ್ನುತ್ತೀರಿ. ಆಗ ಏನು ಮಾಡುವುದು? ನೀವು ಘೋಷಣೆ ಮಾಡಿ ಆಸ್ತಿ ನಮ್ಮದು ಎನ್ನುತ್ತೀರಿ. ಹೀಗೆ ಮಾಡಲು ಬಿಡಲ್ಲ’ ಎಂದು ಕಿಡಿಕಾರಿತು.

ಬುರ್ನಾನಪುರ ಕಟ್ಟೀಯೊಳಗೆ ಇರುವ ಅರಮನೆ, ಶಾ ಶುಜಾ, ನಾಡಿರ್‌ಶಾ ಅವರ ಗೋರಿ ಹಾಗೂ ಬೀಬಿ ಸಾಹೀಬ್ ಮಸೀದಿ ತಮಗೆ ಸೇರಿದ್ದು ಎಂದು 2013ರ ಜುಲೈ 19ರಂದು ಮಧ್ಯಪ್ರದೇಶ ವಕ್ಫ್ ಮಂಡಳಿ ಆದೇಶ ಹೊರಡಿಸಿತ್ತು.

ಇದರ ವಿರುದ್ಧ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸ್ಮಾರಕಗಳು ಕೇಂದ್ರ ಸರ್ಕಾರದ ಆಸ್ತಿಯಾಗಿವೆ. 1904ರ ಪುರಾತನ ಸ್ಮಾರಕ ಸಂರಕ್ಷಣಾ ಕಾಯ್ದೆಯಡಿ ಇವನ್ನು ತಾನು ಸಂರಕ್ಷಣೆ ಮಾಡುತ್ತಿರುವುದಾಗಿ ಪುರಾತತ್ವ ಸರ್ವೇಕ್ಷಣಾ ಇಲಾಖೆ ವಾದಿಸಿತ್ತು. ಈ ವಾದಕ್ಕೆ ಮನ್ನಣೆ ನೀಡಿರುವ ಹೈಕೋರ್ಟ್‌ ನ್ಯಾ। ಜಿ.ಎಸ್. ಆಹ್ಲುವಾಲಿಯಾ ನೇತೃತ್ವದ ಏಕಸದಸ್ಯ ಪೀಠ, ವಕ್ಫ್ ಮಂಡಳಿ ಆದೇಶವನ್ನು ರದ್ದುಗೊಳಿಸಿದೆ.

ಏತನ್ಮಧ್ಯೆ ಇಂದು ವಕ್ಫ್ ಬೋರ್ಡ್ ನ 40 ನಿಯಮಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಮಸೂದೆ ಮಂಡಿಸಲಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು