ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ಜಾಬಲಾಪುರ: ಮಧ್ಯಪ್ರದೇಶದ ಬುರಹಾನಪುರ ಜಿಲ್ಲೆಯ ಕೆಲವು ಪ್ರಸಿದ್ಧ ಸ್ಮಾರಕಗಳು ತನಗೆ ಎಂದು ರಾಜ್ಯದ ವಕ್ಫ್ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿದೆ. ಆ ಸ್ಥಳಗಳಿಂದ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿದೆ.

ಪ್ರಕರಣದ ವಿಚಾರಣೆ ವೇಳೆ ವಕ್ಫ್ ಮಂಡಳಿಯ ವಕೀಲರ ವಿರುದ್ಧ ಹರಿಹಾಯ್ದ ನ್ಯಾಯಪೀಠ, ‘ತಾಜ್ ಮಹಲ್, ಕೆಂಪುಕೋಟೆಯನ್ನೂ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ. ನಿಮಗೆ ಮನಸ್ಸಿಗೆ ಬಂದಾಗ ಯಾವುದೇ ಆಸ್ತಿ ನಮ್ಮದೆಂದು ಘೋಷಿಸಿ ಬಿಡುತ್ತೀರಿ. ನಾಳೆ ನೀವು ಇಡೀ ದೇಶ ವಕ್ಫ್ ಆಸ್ತಿ ಎನ್ನುತ್ತೀರಿ. ಆಗ ಏನು ಮಾಡುವುದು? ನೀವು ಘೋಷಣೆ ಮಾಡಿ ಆಸ್ತಿ ನಮ್ಮದು ಎನ್ನುತ್ತೀರಿ. ಹೀಗೆ ಮಾಡಲು ಬಿಡಲ್ಲ’ ಎಂದು ಕಿಡಿಕಾರಿತು.

ಬುರ್ನಾನಪುರ ಕಟ್ಟೀಯೊಳಗೆ ಇರುವ ಅರಮನೆ, ಶಾ ಶುಜಾ, ನಾಡಿರ್‌ಶಾ ಅವರ ಗೋರಿ ಹಾಗೂ ಬೀಬಿ ಸಾಹೀಬ್ ಮಸೀದಿ ತಮಗೆ ಸೇರಿದ್ದು ಎಂದು 2013ರ ಜುಲೈ 19ರಂದು ಮಧ್ಯಪ್ರದೇಶ ವಕ್ಫ್ ಮಂಡಳಿ ಆದೇಶ ಹೊರಡಿಸಿತ್ತು.

ಇದರ ವಿರುದ್ಧ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸ್ಮಾರಕಗಳು ಕೇಂದ್ರ ಸರ್ಕಾರದ ಆಸ್ತಿಯಾಗಿವೆ. 1904ರ ಪುರಾತನ ಸ್ಮಾರಕ ಸಂರಕ್ಷಣಾ ಕಾಯ್ದೆಯಡಿ ಇವನ್ನು ತಾನು ಸಂರಕ್ಷಣೆ ಮಾಡುತ್ತಿರುವುದಾಗಿ ಪುರಾತತ್ವ ಸರ್ವೇಕ್ಷಣಾ ಇಲಾಖೆ ವಾದಿಸಿತ್ತು. ಈ ವಾದಕ್ಕೆ ಮನ್ನಣೆ ನೀಡಿರುವ ಹೈಕೋರ್ಟ್‌ ನ್ಯಾ। ಜಿ.ಎಸ್. ಆಹ್ಲುವಾಲಿಯಾ ನೇತೃತ್ವದ ಏಕಸದಸ್ಯ ಪೀಠ, ವಕ್ಫ್ ಮಂಡಳಿ ಆದೇಶವನ್ನು ರದ್ದುಗೊಳಿಸಿದೆ.

ಏತನ್ಮಧ್ಯೆ ಇಂದು ವಕ್ಫ್ ಬೋರ್ಡ್ ನ 40 ನಿಯಮಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಮಸೂದೆ ಮಂಡಿಸಲಿದೆ.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ