ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬುಧವಾರ ಬೆಳಗ್ಗೆ ಮದುವೆಯಾದ ನವಜೋಡಿ, ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ಕೆಜಿಎಫ್ ನಲ್ಲಿ ವಧು ಸಾವನ್ನಪ್ಪಿದ್ದ ಬೆನ್ನಲ್ಲೆ, ಇಂದು ಮದುಮಗ ಕೂಡ ಮರಣ ಹೊಂದಿದ್ದಾನೆ.

ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದ್ದು, ಆಂಧ್ರದ ಬೆನಪಲ್ಲಿ ಗ್ರಾಮದ ಲಿಖಿತಾ ಶ್ರೀ ಮೃತಪಟ್ಟಿದ್ದಳು. ಘಟನೆಯಲಗಲಿ ಚಂಬರಸನಹಳ್ಳಿಯ ನವೀನ್ ಸ್ಥಿತಿ ಗಂಭೀರವಾಗಿತ್ತು.

ಬುಧವಾರ ಬೆಳಗ್ಗೆ 11.30ಕ್ಕೆ ಮದುವೆ ನಡೆದಿದ್ದು ಕೆಲವೇ ಗಂಟೆಗಳಲ್ಲಿ ಗಂಡ ಹಂಡತಿ ಜಗಳ ಆಡಿಕೊಂಡಿದ್ದಾರೆ. ನಂತರ ರೂಂ ಸೇರಿದ ದಂಪತಿ ಹೊಡೆದಾಡಿಕೊಂಡಿದ್ದು ಇಬ್ಬರಿಗೂ ಗಂಭೀರ ಗಾಯಗಳಾಗಿದ್ದನ್ನು ಗಮನಿಸಿದ ನೆಂಟರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲಿಖಿತ ಸಂಜೆ ಸಾವನಪ್ಪಿದರೆ. ನವೀನ್ ಇಂದು ಸಾವನಪ್ಪಿದ್ದಾನೆ.

ಇದನ್ನು ಓದಿ: ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಒಲ್ಲದ ಮದುವೆ- ಜಗಳದ ಗೊಡವೆ: ಪರಸ್ಪರ ಸಂಬಂಧಿಕರಾಗಿದ್ದ ಲಿಖಿತ ಶ್ರೀ ಮತ್ತು ನವೀನ್ ಮದುವೆ 4 ತಿಂಗಳ ಹಿಂದೆ ನಿಶ್ಚಯ ಆಗಿತ್ತಾದರೂ ನಂತರ ಕ್ಯಾನ್ಸಲ್ ಸಹಾ ಆಗಿತ್ತು. ಆದರೆ ಸಂಬಂಧಿಕರು, ಸ್ನೇಹಿತರ ಮಧ್ಯಸ್ತಿಕೆಯಿಂದಾಗಿ ಪುನಃ ಸಂಧಾನ ನಡೆದು ಕಳೆದವಾರ ಮದುವೆ ದಿನಾಂಕ ನಿಗದಿ ಮಾಡಲಾಗಿತ್ತು.

ಮದುವೆ ಶಾಸ್ತ್ರದಲ್ಲಿ ಲಿಖಿತ ಲವಲವಿಕೆಯಿಂದ ಇದ್ದರೂ ನವೀನ್ ಅನ್ಯಮನಸ್ಕನಾಗಿ ಚಿಂತಾ ಕ್ರಾಂತನಾಗಿದ್ದನಾದರೂ ಎಲ್ಲವೂ ಸರಿ ಹೋಗುತ್ತದೆ ಎಂದು ನೆಂಟರು ಅಂದುಕೊಂಡಿದ್ದರು. ಆದರೆ ಮಧ್ಯಾಹ್ನ ಊಟ ಮಾಡುವಾಗಲೇ ಆರಂಭವಾದ ಗಲಾಟೆ ಸಂಜೆ 06 ಗಂಟೆಗೆ ಕೊಲೆಯಲ್ಲಿ ಅಂತ್ಯ ಕಂಡಿದೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ